ಬ್ರೇಕಿಂಗ್ ನ್ಯೂಸ್
08-02-22 02:45 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿಚಾರದ ಕಿಚ್ಚು ರಾಜ್ಯದಾದ್ಯಂತ ಆವರಿಸಿದೆ. ಕರಾವಳಿಯಿಂದ ಹತ್ತಿದ ಬೆಂಕಿ ಶಿವಮೊಗ್ಗ, ಬಾಗಲಕೋಟ, ಮಂಡ್ಯ, ವಿಜಯಪುರ ಹೀಗೆ ರಾಜ್ಯದ ಉದ್ದಗಲದಲ್ಲಿ ಹತ್ತಿಕೊಂಡಿದೆ. ಇದೇ ವೇಳೆ, ಹಿಜಾಬ್ ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು ತೀವ್ರ ತಿಕ್ಕಾಟಕ್ಕೆ ವೇದಿಕೆ ಸೃಷ್ಟಿಸಿದೆ.
ರಾಜ್ಯ ಸರಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ಕೋರ್ಟಿಗೆ ಹಾಜರಾಗಿದ್ದು ಹಿಜಾಬ್ ನಿಷೇಧ ವಿಚಾರದಲ್ಲಿ ವಾದ ಮಂಡಿಸಿದ್ದಾರೆ. ಕಾಲೇಜು ಎರಡು ತಿಂಗಳು ಇರುವಾಗ ಇಂತಹ ವಿವಾದ ಉಂಟಾಗ ಬಾರದಿತ್ತು. ಕಾಲೇಜು ಇನ್ನು ಎರಡು ತಿಂಗಳಿದ್ದು ಕೋರ್ಟ್ ಅಲ್ಲೀವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ವಿದ್ಯಾರ್ಥಿಗಳಿಗೆ ಔದಾರ್ಯ ತೋರಬೇಕು ಎಂದು ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಕೀರ್ ವಾದ ಮಂಡನೆ ಮಾಡಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಔದಾರ್ಯ ತೋರುವುದು ಸಂವಿಧಾನದಲ್ಲಿ ಇಲ್ಲ. ಸಂವಿಧಾನದಲ್ಲಿ ಇರುವುದನ್ನು ಮಾತ್ರ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಮುಂದುವರಿದು ವಾದ ಮಂಡಿಸಿದ ಮೊಹಮ್ಮದ್ ತಾಕಿರ್, ಖುರಾನಲ್ಲಿ ವ್ಯಕ್ತಿಯ ಖಾಸಗಿ ಅಂಗಗಳನ್ನು ಮುಚ್ಚಬೇಕು ಎಂದಿದೆ. ಅದರಂತೆ ಹಿಜಾಬ್, ಬುರ್ಖಾ ಧರಿಸಲಾಗುವುದು. ನಮಗೆ ಹಿಜಾಬ್ ಧರಿಸಲು ಸಂವಿಧಾನದ ಧಾರ್ಮಿಕ ಹಕ್ಕಿನ ಪ್ರಕಾರ ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ವಾದ ಆಲಿಸಿದ ನ್ಯಾಯಾಲಯ, ಖುರಾನ್ ಪ್ರತಿಯನ್ನು ಶಾಂತಿ ಪ್ರಕಾಶನದಿಂದ ಹೈಕೋರ್ಟಿಗೆ ತರಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರಕಾರದ ಹಿಜಾಬ್ ನಿಷೇಧಿಸುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಲು ಸೂಚನೆ ನೀಡಿದೆ. ಸರಕಾರದ ಪರವಾಗಿ ಅಟಾರ್ನಿ ಜನರಲ್ ಪ್ರಭುಲಿಂಗ ಹಾಜರಾಗಿದ್ದು ಮಧ್ಯಾಹ್ನ ನಂತರ ವಾದ ಮಂಡನೆ ಮಾಡಲಿದ್ದಾರೆ. ಕೋರ್ಟ್ ಎರಡೂ ಕಡೆಯ ವಾದ ಆಲಿಸಿದ ಬಳಿಕ ಸರಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡುತ್ತಾ ಅನ್ನುವ ಕುತೂಹಲ ಇದೆ.

ಇದಕ್ಕೂ ಮುನ್ನ ವಿಚಾರಣೆ ಆರಂಭಗೊಳ್ಳುವಾಗಲೇ ನ್ಯಾಯಾಧೀಶರು, ಹಿಜಾಬ್ ಬಗ್ಗೆ ವಿವಿಧ ಅರ್ಜಿಗಳು ಕೋರ್ಟಿಗೆ ಸಲ್ಲಿಕೆಯಾಗಿದ್ದು ಬೇರೆ ಬೇರೆಯಾಗಿ ವಿಚಾರಣೆ ನಡೆಸುವುದಿಲ್ಲ. ಒಂದು ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸುತ್ತಿದ್ದು ಅದೇ ತೀರ್ಪು ಎಲ್ಲದಕ್ಕೂ ಅನ್ವಯ ಆಗಲಿದೆ ಎಂದು ಹೇಳಿದರು. ಭಂಡಾರ್ಕರ್ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಹಲವು ಕಡೆಗಳಿಂದ ಹಿಜಾಬ್ ವಿಚಾರದಲ್ಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.
The Karnataka High Court has begun hearing the plea against a hijab ban in several junior colleges in parts of the state. Protests erupted in Mahatma Gandhi Memorial College in Udupi Tuesday as groups of students with saffron scarfs and those wearing hijabs clashed with each other.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm