ಬ್ರೇಕಿಂಗ್ ನ್ಯೂಸ್
08-02-22 02:45 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿಚಾರದ ಕಿಚ್ಚು ರಾಜ್ಯದಾದ್ಯಂತ ಆವರಿಸಿದೆ. ಕರಾವಳಿಯಿಂದ ಹತ್ತಿದ ಬೆಂಕಿ ಶಿವಮೊಗ್ಗ, ಬಾಗಲಕೋಟ, ಮಂಡ್ಯ, ವಿಜಯಪುರ ಹೀಗೆ ರಾಜ್ಯದ ಉದ್ದಗಲದಲ್ಲಿ ಹತ್ತಿಕೊಂಡಿದೆ. ಇದೇ ವೇಳೆ, ಹಿಜಾಬ್ ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು ತೀವ್ರ ತಿಕ್ಕಾಟಕ್ಕೆ ವೇದಿಕೆ ಸೃಷ್ಟಿಸಿದೆ.
ರಾಜ್ಯ ಸರಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ ಕೋರ್ಟಿಗೆ ಹಾಜರಾಗಿದ್ದು ಹಿಜಾಬ್ ನಿಷೇಧ ವಿಚಾರದಲ್ಲಿ ವಾದ ಮಂಡಿಸಿದ್ದಾರೆ. ಕಾಲೇಜು ಎರಡು ತಿಂಗಳು ಇರುವಾಗ ಇಂತಹ ವಿವಾದ ಉಂಟಾಗ ಬಾರದಿತ್ತು. ಕಾಲೇಜು ಇನ್ನು ಎರಡು ತಿಂಗಳಿದ್ದು ಕೋರ್ಟ್ ಅಲ್ಲೀವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ವಿದ್ಯಾರ್ಥಿಗಳಿಗೆ ಔದಾರ್ಯ ತೋರಬೇಕು ಎಂದು ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಕೀರ್ ವಾದ ಮಂಡನೆ ಮಾಡಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಔದಾರ್ಯ ತೋರುವುದು ಸಂವಿಧಾನದಲ್ಲಿ ಇಲ್ಲ. ಸಂವಿಧಾನದಲ್ಲಿ ಇರುವುದನ್ನು ಮಾತ್ರ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಮುಂದುವರಿದು ವಾದ ಮಂಡಿಸಿದ ಮೊಹಮ್ಮದ್ ತಾಕಿರ್, ಖುರಾನಲ್ಲಿ ವ್ಯಕ್ತಿಯ ಖಾಸಗಿ ಅಂಗಗಳನ್ನು ಮುಚ್ಚಬೇಕು ಎಂದಿದೆ. ಅದರಂತೆ ಹಿಜಾಬ್, ಬುರ್ಖಾ ಧರಿಸಲಾಗುವುದು. ನಮಗೆ ಹಿಜಾಬ್ ಧರಿಸಲು ಸಂವಿಧಾನದ ಧಾರ್ಮಿಕ ಹಕ್ಕಿನ ಪ್ರಕಾರ ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ವಾದ ಆಲಿಸಿದ ನ್ಯಾಯಾಲಯ, ಖುರಾನ್ ಪ್ರತಿಯನ್ನು ಶಾಂತಿ ಪ್ರಕಾಶನದಿಂದ ಹೈಕೋರ್ಟಿಗೆ ತರಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರಕಾರದ ಹಿಜಾಬ್ ನಿಷೇಧಿಸುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಲು ಸೂಚನೆ ನೀಡಿದೆ. ಸರಕಾರದ ಪರವಾಗಿ ಅಟಾರ್ನಿ ಜನರಲ್ ಪ್ರಭುಲಿಂಗ ಹಾಜರಾಗಿದ್ದು ಮಧ್ಯಾಹ್ನ ನಂತರ ವಾದ ಮಂಡನೆ ಮಾಡಲಿದ್ದಾರೆ. ಕೋರ್ಟ್ ಎರಡೂ ಕಡೆಯ ವಾದ ಆಲಿಸಿದ ಬಳಿಕ ಸರಕಾರದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡುತ್ತಾ ಅನ್ನುವ ಕುತೂಹಲ ಇದೆ.

ಇದಕ್ಕೂ ಮುನ್ನ ವಿಚಾರಣೆ ಆರಂಭಗೊಳ್ಳುವಾಗಲೇ ನ್ಯಾಯಾಧೀಶರು, ಹಿಜಾಬ್ ಬಗ್ಗೆ ವಿವಿಧ ಅರ್ಜಿಗಳು ಕೋರ್ಟಿಗೆ ಸಲ್ಲಿಕೆಯಾಗಿದ್ದು ಬೇರೆ ಬೇರೆಯಾಗಿ ವಿಚಾರಣೆ ನಡೆಸುವುದಿಲ್ಲ. ಒಂದು ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸುತ್ತಿದ್ದು ಅದೇ ತೀರ್ಪು ಎಲ್ಲದಕ್ಕೂ ಅನ್ವಯ ಆಗಲಿದೆ ಎಂದು ಹೇಳಿದರು. ಭಂಡಾರ್ಕರ್ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಹಲವು ಕಡೆಗಳಿಂದ ಹಿಜಾಬ್ ವಿಚಾರದಲ್ಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.
The Karnataka High Court has begun hearing the plea against a hijab ban in several junior colleges in parts of the state. Protests erupted in Mahatma Gandhi Memorial College in Udupi Tuesday as groups of students with saffron scarfs and those wearing hijabs clashed with each other.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm