ಬ್ರೇಕಿಂಗ್ ನ್ಯೂಸ್
08-02-22 03:21 pm HK Desk news ಕರ್ನಾಟಕ
ಶಿವಮೊಗ್ಗ, ಫೆ.8 : ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೊತ್ತಿಕೊಂಡಿದ್ದು ಅಹಿತಕರ ಘಟನೆಗಳಿಗೆ ಆಸ್ಪದ ನೀಡಿದೆ. ಕಾಲೇಜು ಆವರಣದಲ್ಲಿ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹಾಕಲಾಗಿದೆ.
ಶಿವಮೊಗ್ಗದಲ್ಲಿ ಹಿಜಾಬ್ - ಕೇಸರಿ ಶಾಲಿನ ವಿವಾದ ಬೇರೆಯದ್ದೇ ಆಯಾಮ ಪಡೆದುಕೊಳ್ಳುತ್ತಿದೆ. ವಿವಾದ ಈಗ ಕಲ್ಲು ತೂರಾಟದ ಹಂತಕ್ಕೆ ಬಂದಿದ್ದು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಶಿವಮೊಗ್ಗದ ಬಾಪೂಜಿ ನಗರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಬ್ ಹಾಕಿಕೊಂಡು ಬಂದಿದ್ದು ಕಾಲೇಜಿಗೆ ಪ್ರವೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಕಾಲೇಜಿನಲ್ಲಿ ಅವಕಾಶ ನೀಡಲಾಗಿಲ್ಲ. ಈ ನಡುವೆ, ವಿದ್ಯಾರ್ಥಿಗಳ ನಡುವೆ ಧರ್ಮಗಳ ಪರ ಘೋಷಣೆ ಕೇಳಲಾರಂಭಿಸಿದೆ. ಒಂದು ಕಡೆಯಿಂದ ಜೈಶ್ರೀರಾಮ್, ಇನ್ನೊಂದ್ಕಡೆಯಿಂದ ಜೈ ಹೋ ಅಕ್ಬರ್ ಘೋಷಣೆ ಕೇಳಿಬಂತು.


ಇದೇ ವೇಳೆಗೆ, ವಿದ್ಯಾರ್ಥಿಗಳ ಜೊತೆಗೆ ಅವರ ಕಡೆಯವರು ಕೂಡ ಕಾಲೇಜಿನ ಬಳಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತಿಳಿಹೇಳುವ ಪ್ರಯತ್ನವನ್ನು ಮಾಡಿದ್ದರೂ ಕೆಲವು ಕಿಡಿಗೇಡಿಗಳು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದರು. ರಾಷ್ಟ್ರಧ್ವಜ ಹಾಕುವ ಧ್ವಜಸ್ತಂಭಕ್ಕೆ ಕೇಸರಿ ಧ್ವಜ ಕಟ್ಟಲು ಕೆಲವು ವಿದ್ಯಾರ್ಥಿಗಳು ಮುಂದಾದ ಸಂದರ್ಭದಲ್ಲಿ ಕಟ್ಟಡದ ಮೇಲೆ ನಿಂತಿದ್ದ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ತಕ್ಷಣ ಮಧ್ಯಪ್ರವೇಶ ಮಾಡಿದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.


ಸಾಗರದ ಜ್ಯೂನಿಯರ್ ಕಾಲೇಜ್ ನಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರದಲ್ಲಿ ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾಗಿರುವ ನಡುವೆಯೇ ಅವರ ಜೊತೆಗೆ ಕಾಲೇಜಿಗೆ ಬರುತ್ತಿರುವ ಇತರರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲೂ ವಿವಾದ ಮುಂದುವರಿದಿದ್ದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
As the controversy around wearing of Hijabs in educational institutions in Karnataka heats up, Chief Minister Basavaraj Bommai appealed for calm, asking all those concerned to ‘let children study’. He said the matter would be heard in the high court today, and for everyone to wait for the court’s observation on the matter.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am