ಬ್ರೇಕಿಂಗ್ ನ್ಯೂಸ್
08-02-22 03:21 pm HK Desk news ಕರ್ನಾಟಕ
ಶಿವಮೊಗ್ಗ, ಫೆ.8 : ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೊತ್ತಿಕೊಂಡಿದ್ದು ಅಹಿತಕರ ಘಟನೆಗಳಿಗೆ ಆಸ್ಪದ ನೀಡಿದೆ. ಕಾಲೇಜು ಆವರಣದಲ್ಲಿ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹಾಕಲಾಗಿದೆ.
ಶಿವಮೊಗ್ಗದಲ್ಲಿ ಹಿಜಾಬ್ - ಕೇಸರಿ ಶಾಲಿನ ವಿವಾದ ಬೇರೆಯದ್ದೇ ಆಯಾಮ ಪಡೆದುಕೊಳ್ಳುತ್ತಿದೆ. ವಿವಾದ ಈಗ ಕಲ್ಲು ತೂರಾಟದ ಹಂತಕ್ಕೆ ಬಂದಿದ್ದು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಶಿವಮೊಗ್ಗದ ಬಾಪೂಜಿ ನಗರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಬ್ ಹಾಕಿಕೊಂಡು ಬಂದಿದ್ದು ಕಾಲೇಜಿಗೆ ಪ್ರವೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಕಾಲೇಜಿನಲ್ಲಿ ಅವಕಾಶ ನೀಡಲಾಗಿಲ್ಲ. ಈ ನಡುವೆ, ವಿದ್ಯಾರ್ಥಿಗಳ ನಡುವೆ ಧರ್ಮಗಳ ಪರ ಘೋಷಣೆ ಕೇಳಲಾರಂಭಿಸಿದೆ. ಒಂದು ಕಡೆಯಿಂದ ಜೈಶ್ರೀರಾಮ್, ಇನ್ನೊಂದ್ಕಡೆಯಿಂದ ಜೈ ಹೋ ಅಕ್ಬರ್ ಘೋಷಣೆ ಕೇಳಿಬಂತು.


ಇದೇ ವೇಳೆಗೆ, ವಿದ್ಯಾರ್ಥಿಗಳ ಜೊತೆಗೆ ಅವರ ಕಡೆಯವರು ಕೂಡ ಕಾಲೇಜಿನ ಬಳಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತಿಳಿಹೇಳುವ ಪ್ರಯತ್ನವನ್ನು ಮಾಡಿದ್ದರೂ ಕೆಲವು ಕಿಡಿಗೇಡಿಗಳು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದರು. ರಾಷ್ಟ್ರಧ್ವಜ ಹಾಕುವ ಧ್ವಜಸ್ತಂಭಕ್ಕೆ ಕೇಸರಿ ಧ್ವಜ ಕಟ್ಟಲು ಕೆಲವು ವಿದ್ಯಾರ್ಥಿಗಳು ಮುಂದಾದ ಸಂದರ್ಭದಲ್ಲಿ ಕಟ್ಟಡದ ಮೇಲೆ ನಿಂತಿದ್ದ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ತಕ್ಷಣ ಮಧ್ಯಪ್ರವೇಶ ಮಾಡಿದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.


ಸಾಗರದ ಜ್ಯೂನಿಯರ್ ಕಾಲೇಜ್ ನಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರದಲ್ಲಿ ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾಗಿರುವ ನಡುವೆಯೇ ಅವರ ಜೊತೆಗೆ ಕಾಲೇಜಿಗೆ ಬರುತ್ತಿರುವ ಇತರರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲೂ ವಿವಾದ ಮುಂದುವರಿದಿದ್ದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
As the controversy around wearing of Hijabs in educational institutions in Karnataka heats up, Chief Minister Basavaraj Bommai appealed for calm, asking all those concerned to ‘let children study’. He said the matter would be heard in the high court today, and for everyone to wait for the court’s observation on the matter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm