ಬ್ರೇಕಿಂಗ್ ನ್ಯೂಸ್
08-02-22 03:21 pm HK Desk news ಕರ್ನಾಟಕ
ಶಿವಮೊಗ್ಗ, ಫೆ.8 : ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೊತ್ತಿಕೊಂಡಿದ್ದು ಅಹಿತಕರ ಘಟನೆಗಳಿಗೆ ಆಸ್ಪದ ನೀಡಿದೆ. ಕಾಲೇಜು ಆವರಣದಲ್ಲಿ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹಾಕಲಾಗಿದೆ.
ಶಿವಮೊಗ್ಗದಲ್ಲಿ ಹಿಜಾಬ್ - ಕೇಸರಿ ಶಾಲಿನ ವಿವಾದ ಬೇರೆಯದ್ದೇ ಆಯಾಮ ಪಡೆದುಕೊಳ್ಳುತ್ತಿದೆ. ವಿವಾದ ಈಗ ಕಲ್ಲು ತೂರಾಟದ ಹಂತಕ್ಕೆ ಬಂದಿದ್ದು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಶಿವಮೊಗ್ಗದ ಬಾಪೂಜಿ ನಗರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಬ್ ಹಾಕಿಕೊಂಡು ಬಂದಿದ್ದು ಕಾಲೇಜಿಗೆ ಪ್ರವೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಕಾಲೇಜಿನಲ್ಲಿ ಅವಕಾಶ ನೀಡಲಾಗಿಲ್ಲ. ಈ ನಡುವೆ, ವಿದ್ಯಾರ್ಥಿಗಳ ನಡುವೆ ಧರ್ಮಗಳ ಪರ ಘೋಷಣೆ ಕೇಳಲಾರಂಭಿಸಿದೆ. ಒಂದು ಕಡೆಯಿಂದ ಜೈಶ್ರೀರಾಮ್, ಇನ್ನೊಂದ್ಕಡೆಯಿಂದ ಜೈ ಹೋ ಅಕ್ಬರ್ ಘೋಷಣೆ ಕೇಳಿಬಂತು.
ಇದೇ ವೇಳೆಗೆ, ವಿದ್ಯಾರ್ಥಿಗಳ ಜೊತೆಗೆ ಅವರ ಕಡೆಯವರು ಕೂಡ ಕಾಲೇಜಿನ ಬಳಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತಿಳಿಹೇಳುವ ಪ್ರಯತ್ನವನ್ನು ಮಾಡಿದ್ದರೂ ಕೆಲವು ಕಿಡಿಗೇಡಿಗಳು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದರು. ರಾಷ್ಟ್ರಧ್ವಜ ಹಾಕುವ ಧ್ವಜಸ್ತಂಭಕ್ಕೆ ಕೇಸರಿ ಧ್ವಜ ಕಟ್ಟಲು ಕೆಲವು ವಿದ್ಯಾರ್ಥಿಗಳು ಮುಂದಾದ ಸಂದರ್ಭದಲ್ಲಿ ಕಟ್ಟಡದ ಮೇಲೆ ನಿಂತಿದ್ದ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ತಕ್ಷಣ ಮಧ್ಯಪ್ರವೇಶ ಮಾಡಿದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಸಾಗರದ ಜ್ಯೂನಿಯರ್ ಕಾಲೇಜ್ ನಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರದಲ್ಲಿ ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾಗಿರುವ ನಡುವೆಯೇ ಅವರ ಜೊತೆಗೆ ಕಾಲೇಜಿಗೆ ಬರುತ್ತಿರುವ ಇತರರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲೂ ವಿವಾದ ಮುಂದುವರಿದಿದ್ದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
As the controversy around wearing of Hijabs in educational institutions in Karnataka heats up, Chief Minister Basavaraj Bommai appealed for calm, asking all those concerned to ‘let children study’. He said the matter would be heard in the high court today, and for everyone to wait for the court’s observation on the matter.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm