ಬ್ರೇಕಿಂಗ್ ನ್ಯೂಸ್
08-02-22 05:09 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ವಿವಾದದ ಕಿಚ್ಚು ರಾಜ್ಯಾದ್ಯಂತ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ, ಶಿವಮೊಗ್ಗ, ಬಾಗಲಕೋಟದಲ್ಲಿ ಹಿಜಾಬ್, ಕೇಸರಿ ಕಿಚ್ಚು ತೀವ್ರಗೊಂಡಿದ್ದು ಎರಡೂ ಕಡೆಯಿಂದ ಜನರು ಜಮಾವಣೆಗೊಂಡು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿದ್ದು ಸೆಕ್ಷನ್ ಹೇರಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಿರುವುದರಿಂದ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದೇ ವೇಳೆ, ಹೈಕೋರ್ಟ್ ಅಂಗಳದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಹಿಜಾಬ್ ಪರವಾಗಿ ಪ್ರಬಲ ವಾದ ಮಂಡನೆಯಾಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಪ್ರಶ್ನೆಗಳನ್ನು ಮುಂದಿಡಲಾಗಿದೆ. ಎರಡೂ ವಾದವನ್ನು ಕೇಳಿದ ನ್ಯಾಯಾಧೀಶರು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿದೆ.

ಹೀಗಾಗಿ ಕೋರ್ಟ್, ಸರಕಾರದ ಆದೇಶಕ್ಕೆ ತಡೆಯಾಜ್ಞೆ ನೀಡದೇ ಇರುವುದರಿಂದ ಮತ್ತೆ ಹಿಜಾಬ್ ಬೆಂಕಿ ಹತ್ತಿಕೊಳ್ಳುವ ಕಾರಣದಿಂದ ರಾಜ್ಯ ಸರಕಾರ ರಾಜ್ಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ.
— Basavaraj S Bommai (@BSBommai) February 8, 2022
The controversy over headscarves in Karnataka has intensified, with students defying the government order to use uniform clothing to maintain "unity and equality". All schools and colleges in Karnataka will be shut for the next three days amid the row over wearing hijab by students.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm