ಬ್ರೇಕಿಂಗ್ ನ್ಯೂಸ್
08-02-22 06:27 pm HK Desk news ಕರ್ನಾಟಕ
ಬೆಂಗಳೂರು, ಫೆ 08: ವೈದ್ಯ ದಂಪತಿಯ ಪುತ್ರನೊಬ್ಬ ಅಪಾರ್ಟ್ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಗೋಡಿ ಬಳಿಯ ಕಮ್ಮಸಂದ್ರದಲ್ಲಿ ಮಂಗಳವಾರ ಸಂಭವಿಸಿದೆ.
ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ದಂಪತಿ ಪುತ್ರ ಆದಿತ್ಯ ಪಟೇಲ್(15) ಮೃತ ದುರ್ದೈವಿ. ಈತ ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ.
ಹೊಸೂರು ರಸ್ತೆಯ ಬೊಮ್ಮಸಂದ್ರದ ಹೆಲ್ತ್ ಸಿಟಿಯ ಸ್ಪರ್ಶ್ ಆಸ್ಪತ್ರೆಯಲ್ಲಿ ಡಾ.ಶರಣು ಪಟೇಲ್ ಮತ್ತು ಡಾ.ಮಮತಾ ಇಬ್ಬರೂ ಕೆಲಸ ಮಾಡುತ್ತಿದ್ದಾರೆ. ಕಮ್ಮಸಂದ್ರ ಬಳಿಯ 'ಡ್ಯಾಡಿ' ಅಪಾರ್ಟ್ಮೆಂಟ್ನಲ್ಲಿ ಮಗನ ಜತೆ ದಂಪತಿ ವಾಸವಿದ್ದರು.
ಮಂಗಳವಾರ ಮಧ್ಯಾಹ್ನ ಬಾಲಕ ಆದಿತ್ಯ, ಅಪಾರ್ಟ್ಮೆಂಟ್ನ ಐದು ಅಂತಸ್ತಿನ ಮೇಲಿಂದ ಕೆಳಗೆ ಹಾರಿದ್ದು, ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಯ್ಯೋ ಕಂದ ಸಾಯುವಂತಹದ್ದು ಏನಾಯ್ತಪ್ಪಾ… ಎಂದು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಆದಿತ್ಯ ಮೊಬೈಲ್ ಅನ್ನು ಹೆಚ್ಚಾಗಿ ಬಳಲುತ್ತಿದ್ದನಂತೆ. ಇತ್ತೀಚೆಗೆ ಪಾಲಕರು ಮಗನಿಂದ ಮೊಬೈಲ್ ಅನ್ನು ವಾಪಸ್ ಪಡೆದಿದ್ದರಂತೆ. ಬಳಿಕ ಮಂಕಾಗಿದ್ದ ಆದಿತ್ಯ ಸಾವಿನ ಮನೆಯ ಕದ ತಟ್ಟಿದ್ದಾನೆ ಎನ್ನಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
A student was killed when he jumped down from the 5th building of garden apartment in dadis area of kammasandra near hebbegodi here.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am