ಬ್ರೇಕಿಂಗ್ ನ್ಯೂಸ್
08-02-22 07:56 pm HK Desk news ಕರ್ನಾಟಕ
ಬೆಂಗಳೂರು, ಫೆ.8 : ಹಿಜಾಬ್ ಮತ್ತು ಶಿಕ್ಷಣದ ಬಗ್ಗೆ ಆಯ್ಕೆ ಬಂದಲ್ಲಿ ಶಿಕ್ಷಣ ಆಯ್ದುಕೊಳ್ಳಿ. ಹಿಜಾಬ್ ಮನೆಯೊಳಗೆ ಇಟ್ಟುಕೊಳ್ಳಿ. ಶಿಕ್ಷಣಕ್ಕೆ ಧರ್ಮ ಬೇಡ ಎಂದು ಹೇಳಿಕೆ ನೀಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರೈಯಾ ಅಂಜುಮ್ ಗೆ ನೂರಕ್ಕೂ ಹೆಚ್ಚು ಬೆದರಿಕೆ ಕರೆ ಬಂದಿರುವ ಬಗ್ಗೆ ಆಕೆಯೇ ಹೇಳಿಕೊಂಡಿದ್ದಾರೆ.
ಮಾಧ್ಯಮವೊಂದರ ಡಿಬೇಟ್ ನಲ್ಲಿ ಪಾಲ್ಗೊಂಡ ಸುರೈಯಾ ಅಂಜುಮ್, ತನಗೆ ಇಂಟರ್ನೆಟ್ ಕರೆಗಳ ಮೂಲಕ ನಿರಂತರ ಬೆದರಿಕೆ ಕರೆ ಬಂದಿದೆ. ಫೇಸ್ಬುಕ್ ನಲ್ಲಿ ಲೈವ್ ಬಂದು ವಿಡಿಯೋ ಮಾಡಿದ 24 ಗಂಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ ಪೊಲೀಸ್ ದೂರು ನೀಡಲಿದ್ದೇನೆ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರ ಕೋರ್ಟಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಹೋರಾಟ ಮಾಡುವುದು ಬೇಡ. ಹಿಜಾಬ್ ಮತ್ತು ಶಿಕ್ಷಣ ನಿಮ್ಮ ಆಯ್ಕೆಯಾದಲ್ಲಿ ಶಿಕ್ಷಣವೇ ಆದ್ಯತೆಯಾಗಲಿ. ಧರ್ಮದ ಆಚರಣೆ ಏನಿದೆ ಅದೆಲ್ಲವೂ ಮನೆಯಲ್ಲೇ ಇರಲಿ. ಧರ್ಮಕ್ಕಿಂತ ದೇಶ ಮೊದಲು. ಭಾರತೀಯಳು ಎನ್ನುವುದು ನನಗೆ ಮೊದಲು. ಇದು ನನ್ನ ಆಯ್ಕೆ. ನನ್ನ ಸೋದರಿಯರಿಗೂ ಇದನ್ನೇ ಹೇಳುತ್ತೇನೆ.
ಪಿಎಫ್ಐ ಮತ್ತು ಎಸ್ಡಿಪಿಐ ಅವರ ರಾಜಕೀಯ ಅಸ್ತಿತ್ವ ಸಾಧಿಸುವಲ್ಲಿ ದಾಳ ಆಗಬೇಡಿ. ಆರೆಸ್ಸೆಸ್- ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಪಶು ಆಗಬೇಡಿ ಎಂದು ಹೇಳುತ್ತೇನೆ ಎಂಬುದಾಗಿ ಸುರೈಯಾ ಅಂಜುಮ್ ಹೇಳಿದ್ದಾರೆ. ಸುರೈಯಾ ಅಂಜುಮ್, ತನ್ನ ಫೇಸ್ಬುಕ್ ಪೇಜ್ ನಲ್ಲಿ ಹಿಜಾಬ್ ವಿಚಾರದಲ್ಲಿ ಲೈವ್ ಬಂದು ವಿಡಿಯೋ ಮಾಡಿದ್ದರು.
Congress Suraiya Anjum gets hundreds of threat calls after her Facebook video goes viral stating to remove Hijab. Recently speaking in her Facebook live video she had stated that Muslim girls should remove third hijab and go to their classes.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm