ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm