ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm