ಬ್ರೇಕಿಂಗ್ ನ್ಯೂಸ್
10-02-22 05:06 pm HK Desk news ಕರ್ನಾಟಕ
ಬೆಂಗಳೂರು, ಫೆ.10 : ರಾಜ್ಯ ಮತ್ತು ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಹತ್ವದ ಘಟ್ಟ ತಲುಪಿದೆ. ಸದ್ಯಕ್ಕೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಇದರ ನಡುವೆ ಮಧ್ಯಂತರ ಆದೇಶ ನೀಡಲಾಗಿದೆ.
ಹೈಕೋರ್ಟ್ ಅಂತಿಮ ತೀರ್ಪು ನೀಡುವ ವರೆಗೂ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಬಳಸುವಂತಿಲ್ಲ. ಹಿಜಾಬ್ ಅಥವಾ ಶಾಲು ಆಗಲೀ ಯಾವುದೇ ಧಾರ್ಮಿಕ ಗುರುತುಗಳನ್ನು ಮುಂದಿನ ಆದೇಶದ ವರೆಗೂ ಬಳಸಬಾರದು. ರಾಜ್ಯದಲ್ಲಿ ಶಾಂತಿ ಮರಳುವ ನಿಟ್ಟಿನಲ್ಲಿ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಅಲ್ಲದೆ, ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಮತ್ತೆ ಆರಂಭಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಆದೇಶ ಮಾಡಿದೆ. ಪ್ರತಿ ನಿತ್ಯ ಇದರ ಬಗ್ಗೆ ವಿಚಾರಣೆಯನ್ನು ಮಾಡಲಾಗುವುದು. ಆದರೆ, ತುರ್ತಾಗಿ ಈ ಬಗ್ಗೆ ನಿರ್ಣಯ ಪ್ರಕಟಿಸಬೇಕೆಂಬ ಅರ್ಜಿದಾರರ ಕೋರಿಕೆ ಮೇರೆಗೆ, ಮಧ್ಯಂತರ ಆದೇಶವನ್ನು ನೀಡಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಸ್ತ್ರೀಯರ ಶಿಕ್ಷಣ ಹೀಗೆ ಗಂಭೀರ ವಿಚಾರ ಆಗಿರುವುದರಿಂದ ಈ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಹೈಕೋರ್ಟ್ ಪೀಠ ಹೇಳಿದೆ.
ದೇವದತ್ ಕಾಮತ್, ಸಂಜಯ್ ಹೆಗ್ಡೆ ಸೇರಿದಂತೆ ಕೆಲವು ಹಿರಿಯ ವಕೀಲರು ಹೈಕೋರ್ಟಿನಲ್ಲಿ ಹಿಜಾಬ್ ಪರವಾಗಿ ವಿವಿಧ ತೀರ್ಪುಗಳನ್ನು ಆಧರಿಸಿ ವಾದ ಮಂಡಿಸಿದ್ದರು. ಈ ನಡುವೆ, ಮಧ್ಯಂತರ ತೀರ್ಪು ನೀಡಬೇಕು ಎಂದು ಅರ್ಜಿದಾರರು ಕೇಳಿಕೊಂಡಿದ್ದರು. ಆದರೆ, ರಾಜ್ಯ ಸರಕಾರದ ಪರ ವಕೀಲರು ಮಧ್ಯಂತರ ಆದೇಶ ನೀಡಬಾರದು ಎಂದು ಒತ್ತಾಯಿಸಿದ್ದರು.
Chief Justice of Karnataka HC Ritu Raj Awasthi on Wednesday constituted a bench, comprising himself, Justice Krishna S Dixit and Justice JM Khazi. The bench is now hearing the Karnataka hijab row case. After protests in Bagalkot turned violent and section 144 was imposed in Shivamogga as hijab-versus-saffron scarves protests escalated, Karnataka CM Basavaraj Bommai ordered schools and colleges to be shut for three days. Stay tuned for live updates.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm