ಸೋಮವಾರದಿಂದ ಹತ್ತನೇ ತರಗತಿಗೆ ಮಾತ್ರ ಕ್ಲಾಸ್, ಪಿಯು, ಡಿಗ್ರಿ ಕಾಲೇಜಿಗೆ ರಜೆ ಮುಂದುವರಿಕೆ ; ಮುಖ್ಯಮಂತ್ರಿ

10-02-22 07:49 pm       HK Desk news   ಕರ್ನಾಟಕ

ಹಿಜಾಬ್ ಧರಿಸುವ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದ್ದು, ಶಾಲೆ ಆರಂಭಿಸುವ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ.

ಬೆಂಗಳೂರು, ಫೆ.10 : ಹಿಜಾಬ್ ಧರಿಸುವ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದ್ದು, ಶಾಲೆ ಆರಂಭಿಸುವ ಬಗ್ಗೆ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಪಾಲ್ಗೊಂಡಿದ್ದರು. ಹಂತ ಹಂತವಾಗಿ ಶಾಲೆ, ಕಾಲೇಜು ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸೋಮವಾರದಿಂದ ಹತ್ತನೇ ತರಗತಿ ವರೆಗೆ ಮಾತ್ರ ಶಾಲೆ ಆರಂಭಿಸಲಾಗುವುದು. ಪಿಯುಸಿ, ಪದವಿ, ಇಂಜಿನಿಯರಿಂಗ್ ಇನ್ನಿತರ ಹಂತಗಳ ತರಗತಿಗಳಿಗೆ ರಜೆ ಮುಂದುವರಿಯಲಿದೆ ಎಂದು ಸಭೆಯ ಬಳಿಕ ಮುಖ್ಯಮಂತ್ರಿ ತಿಳಿಸಿದ್ದಾರೆ.

ಅಲ್ಲದೆ, ಶನಿವಾರ ಸಂಜೆ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫೆರೆನ್ಸ್ ನಡೆಸುತ್ತೇನೆ. ಆಯಾ ಜಿಲ್ಲೆಗಳ ಸ್ಥಿತಿಗತಿಗಳನ್ನು ಅವಲೋಕನ ಮಾಡಲಿದ್ದು, ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು. ಸದ್ಯಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಿದ್ಯಾರ್ಥಿ- ವಿದ್ಯಾರ್ಥಿನಿಯರು ತಮ್ಮ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Hijab row Only SSLC classes to commence from Monday PUC and degree colleges to have holidays till further order. The hijab-row triggered protests in Karnataka spread across the state on Tuesday, with campuses witnessing 'conflict-like' situations marked by stone-pelting incidents, use of force by police and the Muslim girls standing their ground for wearing the headscarves, prompting calls for peace and calm both by the government and the High Court, which is now looking into the students' plea for their right to their hijab.