ಬ್ರೇಕಿಂಗ್ ನ್ಯೂಸ್
18-09-20 02:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 18: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಸದಸ್ಯ ದೇವರಾಜ್ ಮಗ ಕಾರ್ಪೊರೇಟರ್ ಯುವರಾಜ್, ನಟ ಸಂತೋಷ್ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್ವುಡ್ ನಟ ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟೀಸ್ ಬಂದಿದೆ. ನಾನು ಈಗ ಹೈದರಾಬಾದ್ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಿಗ್ಗೆ 10 ಘಂಟೆಗೆ ವಿಚಾರಣೆಗೆ ಹಾಜರಾಗ್ತಿನಿ ಎಂದರು.
ಡ್ರಗ್ ಪ್ರಕರಣದಲ್ಲಿ ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದರೆ, ಈಗ ಡ್ರಗ್ ಉರುಳು ಮತ್ತಷ್ಟು ನಟ- ನಟಿಯರನ್ನು ಸುತ್ತಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಈಗಾಗ್ಲೇ ಸ್ಟಾರ್ ದಂಪತಿ ದಿಗಂತ್- ಐಂದ್ರಿತಾ ಅವರನ್ನು ಸಿಸಿಬಿ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ರಾಜಕಾರಣಿಗಳ ಪುತ್ರರು ಇದ್ದಾರೆಂಬ ಮಾಹಿತಿ ಇದ್ದರೂ, ಸಿಸಿಬಿ ಇನ್ನೂ ಆ ಬಗ್ಗೆ ಕಾರ್ಯಾಚರಣೆಗೆ ಮುಂದಾಗಿಲ್ಲ. ಬಂಧಿತರು ನೀಡುತ್ತಿರುವ ಮಾಹಿತಿ ಆಧರಿಸಿ ಒಬ್ಬೊಬ್ಬರನ್ನೇ ವಿಚಾರಣೆಗೆ ಕರೆಸಲಾಗುತ್ತಿದೆ.
ಡ್ರಗ್ ಪೆಡ್ಲರ್ ವೈಭವ್ ಜೈನ್ ಆಯೋಜಿಸಿದ್ದ ಪಾರ್ಟಿಯಲ್ಲಿ ಆರ್.ವಿ.ದೇವರಾಜ್ ಪುತ್ರ ಕಾರ್ಪೊರೇಟರ್ ಯುವರಾಜ್ ಪಾಲ್ಗೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm