ಬ್ರೇಕಿಂಗ್ ನ್ಯೂಸ್
13-02-22 02:53 pm HK Desk news ಕರ್ನಾಟಕ
ಹುಬ್ಬಳ್ಳಿ, ಫೆ 13: ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Chief minister Basavaraj Bommai has warned of strict action against those who fuelling the Hijab issue further.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am