ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm