ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.
ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.
ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.
ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm