ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.
ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.
ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.
ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
29-04-24 02:11 pm
Bangalore Correspondent
BJP MP Sreenivasa Prasad passes away: ಚಾಮರಾಜನ...
29-04-24 11:33 am
Bellari Accident, wedding: ಬಳ್ಳಾರಿ ; ಮದುವೆ ದಿ...
28-04-24 09:39 pm
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 11:05 am
Mangalore Correspondent
Contentful CEO Karthik Rau, Udupi: ಜಗತ್ತಿನ ಮು...
28-04-24 11:03 pm
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm