ಬ್ರೇಕಿಂಗ್ ನ್ಯೂಸ್
15-02-22 01:56 pm HK Desk news ಕರ್ನಾಟಕ
ಮಡಿಕೇರಿ, ಫೆ.15 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕೂಡ 20 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಶಾಲೆಯಿಂದ ಮನೆಗೆ ಮರಳಿದ್ದಾರೆ.
ಹಿಜಾಬ್ ಧರಿಸುವುದು ನಮ್ಮ ಧರ್ಮ. ಹಿಜಬ್ ಇಲ್ಲದೆ ನಾವು ಶಾಲೆಗೆ ತೆರಳುವುದಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದೇ ಇದ್ದರೆ ಮನೆಯಲ್ಲೇ ಕೂರುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿಕೊಂಡಿದ್ದು ಇವರ ಬೆಂಬಲಕ್ಕೆ ಪೋಷಕರು ನಿಂತಿದ್ದಾರೆ.



ಹಿಜಾಬ್ ಇಲ್ಲದೆ ನಾವು ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಆಂಟನಿ ಆಲ್ವಾರಿಸ್ ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸದೆ, ಹಿಜಾಬ್ ಧರಿಸಲು ಬಿಡದಿದ್ದರೆ ನಾವು ಶಾಲೆಗೆ ಬರಲ್ಲ ಎಂದು ಹಿಂದಕ್ಕೆ ತೆರಳಿದ್ದಾರೆ.



ಶಾಲಾ ಆವರಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ಬಂದು ಒಬ್ಬೊಬ್ಬರೇ ಮನೆಗೆ ಮರಳಿದ್ದಾರೆ. ಶಾಲೆಯ ಆವರಣದಲ್ಲಿ ನಿಂತು ಪ್ರಾಂಶುಪಾಲರು ಮಕ್ಕಳ ಮನವೊಲಿಕೆ ಮಾಡಲು ಯತ್ನಿಸಿದರೂ, ಕೆಲವು ವಿದ್ಯಾರ್ಥಿನಿಯರು ಕೇಳಲಿಲ್ಲ.



ನೆಲ್ಲಿಹುದಿಕೇರಿಯಲ್ಲಿ ಸ್ವಲ್ಪ ಮುಸ್ಲಿಂ ಬಾಹುಳ್ಯ ಇದ್ದು ಒಂದಷ್ಟು ಮಂದಿ ಹಿಜಾಬ್ ತೆಗೆದು ತರಗತಿಗೆ ಬಂದರೆ, ಕೆಲವು ಖಟ್ಟರ್ ವಾದಿಗಳು ತಮ್ಮ ಮಕ್ಕಳನ್ನು ಹಿಜಾಬ್ ತೆಗೆಯದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಎರಡನೇ ದಿನವೂ ಈ ಶಾಲೆಯಲ್ಲಿ ಹೈಡ್ರಾಮಾ ಮುಂದುವರಿದಿದೆ. ಸೋಮವಾರ 30 ಮುಸ್ಲಿಂ ವಿದ್ಯಾರ್ಥಿನಿಯರು ಇದೇ ಶಾಲೆಯಿಂದ ಮರಳಿ ಮನೆಗೆ ತೆರಳಿದ್ದರು.
Madikeri 20 Hijab students go back home from school because they were asked to remove.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am