ಬ್ರೇಕಿಂಗ್ ನ್ಯೂಸ್
15-02-22 11:24 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.15 : ಪೊಲೀಸರಿಗೆ ಮೇಲಿನ ಸಿಟ್ಟಿನಲ್ಲಿ ಟ್ರಾಫಿಕ್ ಸಿಗ್ನಲ್ ಕಂಬದ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಅಶೋಕ ನಗರದ ಪೊಲೀಸರು ಬಂಧಿಸಿದ್ದಾರೆ. ದಂಪತಿಯನ್ನು ಸಿಕಂದರ್ ಮತ್ತು ನಜ್ಮಾ ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಬರೋಬ್ಬರಿ 20 ಲಕ್ಷ ಮೌಲ್ಯದ ಸುಮಾರು 230 ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಾಕ್ ಡೌನ್ ವೇಳೆ ತಮ್ಮ ಟೀ ಅಂಗಡಿಯಲ್ಲಿದ್ದ ವಸ್ತುಗಳನ್ನ ಪೊಲೀಸರು ದಾಳಿ ನೆಪದಲ್ಲಿ ನಾಶಪಡಿಸಿದ್ದರು ಎಂಬ ಸಿಟ್ಟಿನಲ್ಲಿ ಪೊಲೀಸರಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ದಂಪತಿ ನಗರದ ಸಿಗ್ನಲ್ ಗಳಲ್ಲಿನ ಬ್ಯಾಟರಿಗಳ ಕಳ್ಳತನಕ್ಕೆ ಇಳಿದಿದ್ದರು.
ಗಂಡ - ಹೆಂಡತಿ ಸೇರಿಕೊಂಡು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯೊಳಗೆ ಕಳ್ಳತನ ಮಾಡುತ್ತಿದ್ದರು. ತಮ್ಮ ಟಿವಿಎಸ್ ಎನ್ ಟಾರ್ಕ್ ಬೈಕ್ ನಲ್ಲಿ ಒಂದು ಕಟರ್ ಸಹಿತ ಸ್ಥಳಕ್ಕೆ ಬಂದು ಟ್ರಾಫಿಕ್ ಸಿಗ್ನಲ್ ಕಂಬದಲ್ಲಿ ವೈರ್ ಕಟ್ ಮಾಡಿ ಸುಲಭವಾಗಿ ಬ್ಯಾಟರಿ ಎತ್ತಿಕೊಂಡು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಗಳನ್ನ ಹೆಡೆಮುರಿ ಕಟ್ಟಲು ವಿಶೇಷ ಕಾರ್ಯಾಚರಣೆ ನಡೆಸಿದ ಅಶೋಕನಗರ ಪೊಲೀಸ್ ಠಾಣೆಯ ಎಎಸ್ಐ ದೇವರಾಜ್ ಮತ್ತು ಇನ್ಸ್ಪೆಕ್ಟರ್ ಮಲ್ಲೇಶ್ ಬೊಳೆತ್ತಿನ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕದ್ದ 7 ಸಾವಿರ ಬೆಲೆಯ ಬ್ಯಾಟರಿಗಳನ್ನ ಕೇವಲ 1 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಇದೇ ಸುಳಿವು ಆಧರಿಸಿ ತನಿಖೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.
The police on Wednesday said that a couple have been arrested for stealing batteries from traffic signals. They added that 230 batteries stolen from 68 traffic junctions over the last few months have also been recovered. These batteries are used to run traffic signals.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm