ಬ್ರೇಕಿಂಗ್ ನ್ಯೂಸ್
16-02-22 09:44 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.16 : ಸಚಿವ ಕೆ.ಎಸ್.ಈಶ್ವರಪ್ಪ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು, ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹ ಮಾಡಿದ್ದಾರೆ.
ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿದರು. ಆದರೆ ಸ್ಪೀಕರ್ ಅವಕಾಶ ಕೊಡಲಿಲ್ಲ. ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗೋ ವರೆಗೂ ಧರಣಿ ನಡೆಸ್ತೀವಿ. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ, ಸುಮೊಟೊ ಕೇಸು ದಾಖಲಿಸಿ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಈ ಬಗ್ಗೆ ರಾಜ್ಯಪಾಲರಿಗೂ ಒತ್ತಾಯ ಮಾಡುತ್ತೇವೆ ಎಂದರು ಹರಿಪ್ರಸಾದ್.
![]()
ವಿಪಕ್ಷ ಸದಸ್ಯರ ಗದ್ದಲದಿಂದಾಗಿ ಸ್ಪೀಕರ್ ಆಡಳಿತ ಮತ್ತು ವಿಪಕ್ಷದ ಪ್ರಮುಖರನ್ನು ಕರೆದು ಸಂಧಾನ ಸಭೆ ನಡೆಸಿದರೂ ಯಶಸ್ವಿಯಾಗಲಿಲ್ಲ. ಅನಂತರ ಕಾಂಗ್ರೆಸ್ ಸದಸ್ಯರು ಸದನಕ್ಕೆ ರಾಷ್ಟ್ರ ಧ್ವಜ ಹಿಡಿದು ಬಂದು ಪ್ರತಿಭಟನೆ ನಡೆಸಿದರು. ಪರಿಷತ್ ನಲ್ಲಿ ಸಭಾಪತಿ ಪ್ರಶ್ನೋತ್ತರ ಕಲಾಪಕ್ಕೆ ಮುಂದಾದರೆ, ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗುತ್ತಾ ಬಾವಿಗಿಳಿದು ಧರಣಿ ನಡೆಸಿದರು. ದೇಶದ್ರೋಹಿ, ನಾಡದ್ರೋಹಿ ಎನ್ನುತ್ತಾ ಘೋಷಣೆ ಕೂಗಿದರು. ಇದರ ನಡುವೆಯೇ ಕಂದಾಯ ಸಚಿವ ಅಶೋಕ್, ಪ್ರಶ್ನೆಗೆ ಉತ್ತರ ನೀಡಲು ಆರಂಭಿಸಿದರು.

ಇದೇ ವೇಳೆ, ಸದನದಲ್ಲಿ ಎದ್ದು ನಿಂತ ನೀಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸದಸ್ಯರು ಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ಆಕ್ಷೇಪಿಸಿದರು. ಈ ವಿಚಾರದಲ್ಲಿ ಬಹಳಷ್ಟು ಚರ್ಚೆ ಆಗಿದೆ. ಅಡರ್ನ್ಮೆಂಟ್ ಮೋಷನ್ ಮೂಮೆಂಟ್ ಮಾಡಲು ಸಾಧ್ಯವಿಲ್ಲ ಅಂತ ಕಾನೂನು ಸಚಿವರು ಹೇಳಿದ್ದಾರೆ. ಆದರೆ ಕಾಂಗ್ರೆಸ್ ಸದಸ್ಯರು ಧ್ವಜ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ರಾಷ್ಟ್ರ ಧ್ವಜವನ್ನ ಹೀಗೆ ಹಿಡಿಯಬಾರದು, ಇದು ಸಂವಿಧಾನ ಬಾಹಿರ. ನಿಮಗೆ ಬೇಕಾದಂತೆ ಮಾಡಿಕೊಳ್ಳಲು ಆಗಲ್ಲ ಎಂದರು.
ಇದರ ನಡುವೆ ಸ್ಪೀಕರ್ ಮಧ್ಯಪ್ರವೇಶ ಮಾಡಿದ್ದು ರಾಷ್ಟ್ರ ಧ್ವಜವನ್ನ ನಿಮ್ಮ ಪ್ರತಿಭಟನೆಗೆ ಬಳಸಿಕೊಳ್ಳುವುದು ಸರಿಯಲ್ಲ. ನಿಮ್ಮರಾಜಕೀಯ ಪಕ್ಷಕ್ಕೆ ದೊಡ್ಡ ಇತಿಹಾಸ ಇದೆ. ರಾಷ್ಟ್ರ ಧ್ವಜವನ್ನ ಈ ರೀತಿಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಅಂತ ಸೂಚಿಸಿದರು. ಇದಕ್ಕಿಂತ ದೇಶದ್ರೋಹದ ಚಟುವಟಿಕೆ ಮತ್ತೊಂದಿಲ್ಲ ಎಂದು ಕಾಂಗ್ರೆಸ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, ದೇಶದ ಇತಿಹಾಸಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿಲ್ಲ. ಕಾಂಗ್ರೆಸ್ ಇದೇ ಮೊದಲ ಬಾರಿಗೆ ಸದನದಲ್ಲಿ ರಾಷ್ಟ್ರ ಧ್ವಜ ಹಿಡಿದಿದ್ದಾರೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನದಲ್ಲಿ ಮಾತ್ರ ನಿಯಮ ಪ್ರಕಾರ ಹಾರಿಸುವುದು. ನಾವು ಜನರಿಗೆ, ಮಕ್ಕಳಿಗೆ ಮಾದರಿಯಾಗಬೇಕು. ಎದ್ದು ನಿಂತು ಗೌರವ ಸೂಚಿಸುವ ಧ್ವಜವನ್ನು ಸದನದ ಬಾವಿಗಿಳಿದು ಧರಣಿಗೆ ಬಳಸಿ ಅಪಮಾನ ಮಾಡಿದ್ದಾರೆ.
ಕಾಂಗ್ರೆಸ್ ನವರಿಗೆ ಒಂದು ಪ್ರಶ್ನೆ ಮಾಡ್ತೀವಿ. ಹುಬ್ಬಳಿಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಸವಾಲು ಬಂತು. ಕಾಶ್ಮೀರದಲ್ಲಿ ಧ್ವಜ ಹಾರಿಸಿ ಅಂತ ಭಯೋತ್ಪಾದಕರು ಕರೆ ನೀಡಿದ್ರು. ಆಗ ಕಾಂಗ್ರೆಸ್ ನವರು ಎಲ್ಲಿ ಹೋಗಿದ್ರು. ಹೆದರಿ ಬಿಲ ಸೇರಿದ್ದರು. ಆಗ ಕಾಶ್ಮೀರದಲ್ಲಿ ಧ್ವಜ ಹಾರಿಸಿದ್ದು ಬಿಜೆಪಿ. ಎಂದೂ ಭಾರತ್ ಮಾತಾಕೀ ಜೈ ಹೇಳದ ಕಾಂಗ್ರೆಸ್, ಈ ನಿಟ್ಟಿನಲ್ಲಾದ್ರೂ ಜೈಕಾರ ಹಾಕಿದ್ರು. ಆದರೆ ಇವರದ್ದು ನಕಲಿ ಜೈಕಾರ ಎಂದು ಮೂಲಿಸಿದರು. ಕೊನೆಗೆ ಗದ್ದಲ ನಡುವೆಯೇ ಸದನವನ್ನು ಸ್ಪೀಕರ್ ಕಾಗೇರಿ ನಾಳೆಗೆ ಮುಂದೂಡಿದರು.
Leader of Opposition in Karnataka Legislative Assembly Siddaramaiah has said that a sedition case should be filed against the Minister for Rural Development and Panchayat Raj KS Eshwarappa for his purported claim of hoisting a saffron flag at the Red Fort. Eshwarappa recently said that they will hoist a saffron flag at Red Fort and that the Chief Minister of the State should sack him from the Cabinet, he added. He has no right to continue as a minister after what he has said, added the Congress leader.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm