ಬ್ರೇಕಿಂಗ್ ನ್ಯೂಸ್
17-02-22 08:22 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ಹಿಜಾಬ್ ವಿವಾದ ರಾಜ್ಯದಾದ್ಯಂತ ಕಿಚ್ಚು ಹಚ್ಚಿರುವಾಗಲೇ ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಅಲ್ಪಸಂಖ್ಯಾತರ ಶಾಲೆಗಳಲ್ಲೂ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳಿರುವುದನ್ನು ಧರಿಸದಂತೆ ಆದೇಶ ಹೊರಡಿಸಿದೆ.
ಈ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದ್ದು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸಬೇಕೆಂದು ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಎಲ್ಲ ರೀತಿಯ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಗಳನ್ನು ಧರಿಸುವಂತಿಲ್ಲ ಎಂದು ತಿಳಿಸಲಾಗಿದೆ. ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟ, ಧಾರ್ಮಿಕ ಚಿಹ್ನೆಗಳನ್ನು ಕೂಡ ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಮುಂದಿನ ಆದೇಶದ ವರೆಗೂ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತು ಧರಿಸಿ ಹೋಗುವಂತಿಲ್ಲ. ಸಮವಸ್ತ್ರ ಕಡ್ಡಾಯ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಕೋರ್ಟ್ ಆದೇಶದ ಹೊರತಾಗಿಯೂ ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅವಾಂತರ ಸೃಷ್ಟಿಸಿದ್ದು ಹಲವೆಡೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ನಡೆಸಿದ್ದಾರೆ. ಇದರ ನಡುವೆಯೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. ಇಲಾಖೆಯ ವ್ಯಾಪ್ತಿಯಡಿ ಬರುವ ಹಲವು ಉರ್ದು ಶಾಲೆಗಳಲ್ಲಿ ಹಿಜಾಬ್ ನಿರಾಕರಿಸಿದ್ದಕ್ಕೆ ಭಾರೀ ವಿರೋಧ ಕೇಳಿಬಂದಿದ್ದು ವಿದ್ಯಾರ್ಥಿಗಳು ಮತ್ತು ಸಿಬಂದಿ ನಡುವೆ ಜಟಾಪಟಿ ನಡೆದಿದೆ.
The state's minority welfare hajj and wadf department has issued a circular forbidding students to wear any kind of shawl, scarp or hijab intheir schools.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm