ಬ್ರೇಕಿಂಗ್ ನ್ಯೂಸ್
17-02-22 10:52 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೆ ಸೇನೆಗೆ ಜವಾಬ್ದಾರಿ ನೀಡುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಹೈಕೋರ್ಟ್ ನಿಂದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಜಾಮೀನು ಸಹಿತ ವಾರೆಂಟ್ ಜಾರಿಯಾಗಿತ್ತು. ಕೊನೆಗೂ ಇಂದು ಕೋರ್ಟ್ ಗೆ ಹಾಜರಾದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಎಸ್. ಪ್ರಭಾಕರ್ ಗೈರು ಹಾಜರಿಗೆ ಬೇಷರತ್ ಆಗಿ ನ್ಯಾಯಾಲಯದ ಕ್ಷಮೆ ಕೋರಿದರು.
ಈ ವೇಳೆ, ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಎಂಜಿನಿಯರ್ ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಛೀಮಾರಿ ರೀತಿಯಲ್ಲಿ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಹೈಕೋರ್ಟ್ ಪ್ರಶ್ನೆ ಮಾಡಿತು.

ರಸ್ತೆಗಳನ್ನು ಸರಿಪಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಪೈಥಾನ್ ಯಂತ್ರ ಬಳಸಲು ಟೆಂಡರ್ ಕರೆಯಲಾಗಿದೆ. 20 ವರ್ಷ ಬಾಳಿಕೆಯ ರಸ್ತೆಗಳನ್ನು ನಿರ್ಮಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಕಾಮಗಾರಿ ನಡೆಯುತ್ತಿದೆ ಎಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿದರು. ಆಗ ಕೋರ್ಟ್, ನಿಮ್ಮ ಅಧೀನ ಇಂಜಿನಿಯರ್ಗಳೇ ಸಮಸ್ಯೆ ಸೃಷ್ಟಿಸಿದ್ದಾರೆ.
ನಿಮ್ಮ ಮನಸ್ಸನ್ನು ಸ್ವತಂತ್ರವಾಗಿ ಅನ್ವಯಿಸಿ, ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಬಯಸದ ನಿಮ್ಮ ಎಂಜಿನಿಯರ್ಗಳ ನಂಬಿ ಕೂರಬೇಡಿ. ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಬೇಕು. ದುರಸ್ತಿಯಾದ ರಸ್ತೆಗಳ ಪರಿಶೀಲನೆ ನಡೆಸುತ್ತೇವೆ. ರಸ್ತೆ ಗುಂಡಿಗಳಿಂದ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿ ಇಂಜಿನಿಯರ್ಗಳಿಗೆ ನೀಡುವುದಾಗಿ ಬಿಬಿಎಂಪಿ ಪ್ರಧಾನ ಇಂಜಿನಿಯರ್ಗೆ ಹೈಕೋರ್ಟ್ ಎಚ್ಚರಿಕೆ ನೀಡಿತು.
Bengaluru pothole menace, the High Court had directed on February 7 that the BBMP engineer-in-chief should be present before the court for the inquiry to be taken up on February 15. The court had also sought information on technology used for pothole filling and measures taken on building quality roads in the city.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm