ಬ್ರೇಕಿಂಗ್ ನ್ಯೂಸ್
17-02-22 10:52 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೆ ಸೇನೆಗೆ ಜವಾಬ್ದಾರಿ ನೀಡುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ ಬಿಬಿಎಂಪಿ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ಹೈಕೋರ್ಟ್ ನಿಂದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಜಾಮೀನು ಸಹಿತ ವಾರೆಂಟ್ ಜಾರಿಯಾಗಿತ್ತು. ಕೊನೆಗೂ ಇಂದು ಕೋರ್ಟ್ ಗೆ ಹಾಜರಾದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಎಸ್. ಪ್ರಭಾಕರ್ ಗೈರು ಹಾಜರಿಗೆ ಬೇಷರತ್ ಆಗಿ ನ್ಯಾಯಾಲಯದ ಕ್ಷಮೆ ಕೋರಿದರು.
ಈ ವೇಳೆ, ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಎಂಜಿನಿಯರ್ ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಛೀಮಾರಿ ರೀತಿಯಲ್ಲಿ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಹೈಕೋರ್ಟ್ ಪ್ರಶ್ನೆ ಮಾಡಿತು.

ರಸ್ತೆಗಳನ್ನು ಸರಿಪಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಪೈಥಾನ್ ಯಂತ್ರ ಬಳಸಲು ಟೆಂಡರ್ ಕರೆಯಲಾಗಿದೆ. 20 ವರ್ಷ ಬಾಳಿಕೆಯ ರಸ್ತೆಗಳನ್ನು ನಿರ್ಮಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಡಿಯೂ ಕಾಮಗಾರಿ ನಡೆಯುತ್ತಿದೆ ಎಂದು ಹೈಕೋರ್ಟ್ಗೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಹೇಳಿದರು. ಆಗ ಕೋರ್ಟ್, ನಿಮ್ಮ ಅಧೀನ ಇಂಜಿನಿಯರ್ಗಳೇ ಸಮಸ್ಯೆ ಸೃಷ್ಟಿಸಿದ್ದಾರೆ.
ನಿಮ್ಮ ಮನಸ್ಸನ್ನು ಸ್ವತಂತ್ರವಾಗಿ ಅನ್ವಯಿಸಿ, ರಸ್ತೆ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಬಯಸದ ನಿಮ್ಮ ಎಂಜಿನಿಯರ್ಗಳ ನಂಬಿ ಕೂರಬೇಡಿ. ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಬೇಕು. ದುರಸ್ತಿಯಾದ ರಸ್ತೆಗಳ ಪರಿಶೀಲನೆ ನಡೆಸುತ್ತೇವೆ. ರಸ್ತೆ ಗುಂಡಿಗಳಿಂದ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿ ಇಂಜಿನಿಯರ್ಗಳಿಗೆ ನೀಡುವುದಾಗಿ ಬಿಬಿಎಂಪಿ ಪ್ರಧಾನ ಇಂಜಿನಿಯರ್ಗೆ ಹೈಕೋರ್ಟ್ ಎಚ್ಚರಿಕೆ ನೀಡಿತು.
Bengaluru pothole menace, the High Court had directed on February 7 that the BBMP engineer-in-chief should be present before the court for the inquiry to be taken up on February 15. The court had also sought information on technology used for pothole filling and measures taken on building quality roads in the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am