ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.

ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am