ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.
ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm