ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.

ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm