ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.
ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm