ಬ್ರೇಕಿಂಗ್ ನ್ಯೂಸ್
19-02-22 01:15 pm HK Desk news ಕರ್ನಾಟಕ
ಶಿವಮೊಗ್ಗ, ಫೆ.19 : ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಶಿವಮೊಗ್ಗ ನಗರದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಮತ್ತು ದ್ವಿತೀಯ ಪಿಯುಸಿಯ 58 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶ ಧಿಕ್ಕರಿಸಿ, ತಾಲೂಕು ದಂಡಾಧಿಕಾರಿ ವಿಧಿಸಿರುವ ನಿರ್ಬಂಧ ಆದೇಶ ಉಲ್ಲಂಘಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಅಮಾನತಿನಲ್ಲಿರಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕುಳಿತು ಪ್ರತಿಭಟನೆ ಮಾಡುತ್ತ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ಕೇಳಲು ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಮುಷ್ಕರ ನಿರತ ವಿದ್ಯಾರ್ಥಿನಿಯರು ಕಾಲೇಜಿನ ಆವರಣ ಪ್ರವೇಶಿಸಿ ಗುಂಪು ಕಟ್ಟಿಕೊಂಡು ಘೋಷಣೆಗಳನ್ನು ಕೂಗಿ, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವರ್ತನೆಯಿಂದ ತಮ್ಮ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಉಳಿದ ವಿದ್ಯಾರ್ಥಿಗಳು ಲಿಖಿತ ದೂರು ಸಲ್ಲಿಸಿದ್ದನ್ನು ಪ್ರಾಂಶುಪಾಲರು ಉಲ್ಲೇಖಿಸಿದ್ದಾರೆ.
ಶಾಂತಿ ಮತ್ತು ಸಮಾಧಾನದಿಂದ ವರ್ತಿಸಿ ಕಾಲೇಜಿನಲ್ಲಿ ಸುಗಮವಾಗಿ ಪಾಠ ಪ್ರವಚನ ನಡೆಸಲು ಅನುವು ಮಾಡಿಕೊಡುವಂತೆ ವಿನಂತಿಸಿದರೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಬೆಲೆ ಕೊಡಲಿಲ್ಲ ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳು ಹೇಳಿರುವ ವಿಡಿಯೊ ವೈರಲ್ ಆಗಿದೆ.
ಅಮಾನತುಗೊಂಡಿರುವ ವಿದ್ಯಾರ್ಥಿನಿಯರು ಅಮಾನತು ಅವಧಿಯಲ್ಲಿ ಕಾಲೇಜಿನ ಆವರಣ ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜಿನ ನಿಬಂಧನೆ ಹಾಗೂ ಕಾನೂನು ಗೌರವಿಸುವ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ಆಗಮಿಸಿ ವಿಧೇಯರಾಗಿ ನಡೆದುಕೊಳ್ಳುವುದಾಗಿ ಲಿಖಿತ ಕ್ಷಮಾಪಣೆ ಪತ್ರ ಸಲ್ಲಿಸಿದಲ್ಲಿ ಮಾತ್ರ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
A controversy has erupted after reports of the suspension of 58 students of a Karnataka college for protesting against hijab restrictions in Shivamogga district surfaced online.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm