ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.
ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
17-07-25 04:50 pm
Bangalore Correspondent
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am