ಬ್ರೇಕಿಂಗ್ ನ್ಯೂಸ್
19-02-22 02:03 pm HK Desk news ಕರ್ನಾಟಕ
ತುಮಕೂರು, ಫೆ.19 : ಹಿಜಾಬ್ ಗಲಾಟೆಯ ಪರಿಣಾಮ ವಿದ್ಯಾರ್ಥಿಗಳ ಮೇಲೆ ಮಾತ್ರ ಬೀರಿದ್ದಲ್ಲ. ಕೆಲವು ಕಡೆ ಕಾಲೇಜು ಶಿಕ್ಷಕರ ಮೇಲೂ ಗಂಭೀರ ಪರಿಣಾಮ ಬೀರಿದೆ. ತುಮಕೂರಿನಲ್ಲಿ ಹಿಜಾಬ್ ಹಾಕಲು ನಿರ್ಬಂಧ ಹಾಕಿದ ನೆಪದಲ್ಲಿ ಇಂಗ್ಲಿಷ್ ಉಪನ್ಯಾಸಕಿಯೊಬ್ಬರು ಕೆಲಸವನ್ನೇ ತ್ಯಜಿಸಿದ್ದಾರೆ.
ಜೈನ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಚಾಂದಿನಿ ಹಿಜಾಬ್ ಕಾರಣಕ್ಕೆ ಉದ್ಯೋಗವನ್ನೇ ತ್ಯಜಿಸಿದ ಯುವತಿ. ಇದು ನನ್ನ ವೈಯಕ್ತಿಕ ಗೌರವದ ವಿಚಾರ. ಹಿಜಾಬ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಚಾಂದಿನಿ ಹೇಳಿದ್ದಾರೆ.
ಜೈನ್ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದೇನೆ. ಈ ಸಮಯದಲ್ಲಿ ನನಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಈಗ ಪ್ರಾಂಶುಪಾಲರು ಕರೆದು ಹಿಜಾಬ್ ತೆಗೆದು ತರಗತಿಯಲ್ಲಿ ಪಾಠ ಮಾಡುವಂತೆ ಸೂಚಿಸಿದ್ದಾರೆ. ಈವರೆಗೂ ಹಿಜಾಬ್ ಧರಿಸಿಯೇ ಪಾಠ ಮಾಡಿದ್ದೇನೆ. ಈಗ ಹಿಜಾಬ್ ತೆಗೆಯಲು ಹೇಳಿದ್ದು ನನಗೆ ಹರ್ಟ್ ಆಗಿದೆ. ಗೌರವಕ್ಕೆ ಧಕ್ಕೆಯಾಗಿದೆ. ನನಗೆ ಮುಂದೆ ಈ ಕಾಲೇಜಿನಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ರಾಜಿನಾಮೆ ನೀಡಿದ್ದೇನೆ ಎಂದು ಚಾಂದಿನಿ ಹೇಳಿದ್ದಾರೆ.
ಧರ್ಮದ ಪ್ರಕಾರ ನಡೆದುಕೊಳ್ಳುವುದು ಸಂವಿಧಾನ ಕೊಟ್ಟಿರುವ ಹಕ್ಕು. ಇದನ್ನು ಯಾರು ಕೂಡ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ನಾನು ಖಂಡಿಸುತ್ತೇನೆ ಎಂದವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಲೇಜಿನ ಆಡಳಿತ ನಿರಾಕರಿಸಿದೆ.
ಹೈಕೋರ್ಟಿನಲ್ಲಿ ಹಿಜಾಬ್ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಮಧ್ಯಂತರ ಆದೇಶದಲ್ಲಿ ಯಾರು ಕೂಡ ಧಾರ್ಮಿಕ ವಸ್ತ್ರ, ಗುರುತುಗಳನ್ನು ಧರಿಸಿ ಬರುವಂತಿಲ್ಲ ಎಂದು ತಿಳಿಸಿತ್ತು. ಈ ಬಗ್ಗೆ ರಾಜ್ಯದೆಲ್ಲೆಡೆ ಮುಸ್ಲಿಮರಿಂದ ವಿರೋಧ ಕೇಳಿಬಂದಿದ್ದು ಇದರ ಪರಿಣಾಮ ಈಗ ಕಾಲೇಜು ಉಪನ್ಯಾಸಕರಿಗೂ ತಟ್ಟಿದೆ.
An English lecturer working as a guest faculty has resigned from her post as she was asked to shun the hijab while teaching in Tumakuru district of Karnataka on Friday. “It is a matter of my self-respect. I can’t teach without the hijab,” the lecturer Chandini said after quitting.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm