ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm