ಬ್ರೇಕಿಂಗ್ ನ್ಯೂಸ್
20-02-22 09:08 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.20 : ಮಸೀದಿ ಹಾಗೂ ಮಂದಿರಗಳಲ್ಲಿ ಧ್ವನಿವರ್ಧಕಗಳ ಶಬ್ದ ತಗ್ಗಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಜನರ ಅಹವಾಲು ಆಲಿಸುವ ಸಲುವಾಗಿ ಟ್ವಿಟರ್ ಲೈವ್ನಲ್ಲಿ ನಡೆಸಿದ್ದ #AskCPBlr ಸೆಷನ್ನಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕಮಿಷನರ್ ಜತೆ ಬೆಂಗಳೂರು ನಗರದ ಜನರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಜತೆಗೆ, ಕೆಲವು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಸೆಷನ್ನಲ್ಲಿ ಮಲ್ಲೇಶ್ವರದ ಶ್ರೀರಾಮ್ ಎಂಬವರು, ತಮ್ಮ ಮನೆ ಬಳಿಯ ಮಸೀದಿಯಲ್ಲಿ ಆಜಾನ್ ಕೂಗುವ ವೇಳೆ ಧ್ವನಿವರ್ಧಕದ ಶಬ್ದ ನಿಗದಿತ ಡೆಸಿಬಲ್ಗಿಂತ ಹೆಚ್ಚಾಗಿದೆ ಎಂಬ ದೂರನ್ನು ನೀಡಿದರು. ಮಾತ್ರವಲ್ಲ, ಈ ಶಬ್ದ ಕಡಿಮೆ ಮಾಡಿಸುವಂತೆ ಮಲ್ಲೇಶ್ವರದ ಪೊಲೀಸರಿಗೆ ತಿಳಿಸಿದ್ದರೂ ಸಮಸ್ಯೆ ಮುಂದುವರಿದಿದೆ. ದೂರು ನೀಡಿದ ನಂತರ ಒಂದೆರಡು ದಿನ ಮಾತ್ರ ಸದ್ದು ಕಡಿಮೆ ಇರುತ್ತದೆ, ಬಳಿಕ ಮೊದಲಿನಂತೆ ಜೋರಾಗುತ್ತದೆ ಎಂದು ಅಹವಾಲು ಹೇಳಿಕೊಂಡಿದ್ದಾರೆ.
ಅವರ ಅಹವಾಲಿಗೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಮಂದಿರ-ಮಸೀದಿಗಳ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್ ಒಳಗೇ ಇರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದಾಗ್ಯೂ ಅತಿಯಾದ ಶಬ್ದ ಹೊಮ್ಮಿಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಸಂಬಂಧಿತ ಠಾಣೆಯ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
All the mosques and temples that use the loudspeaker have been instructed to keep people from getting embarrassed. The city police commissioner Kamalpant warned that proper action would be taken against those who made noise beyond the sanctioned decibel.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm