ಬ್ರೇಕಿಂಗ್ ನ್ಯೂಸ್
21-02-22 03:25 pm HK News Desk ಕರ್ನಾಟಕ
ಬೆಂಗಳೂರು, ಫೆ.21: ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಗೂಂಡಾ ವರ್ತನೆಗೆ ಇನ್ನೆಷ್ಟು ಕಾರ್ಯಕರ್ತರು ಬಲಿಯಾಗಬೇಕ್ರೀ.. ಕಳೆದ ಬಾರಿ ನೀವು ವಿರೋಧ ಪಕ್ಷದಲ್ಲಿದ್ದಾಗ ಬ್ಯಾನ್ ಮಾಡುವಂತೆ ಆಗ್ರಹ ಮಾಡುತ್ತಿದ್ದೀರಲ್ಲಾ.. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರ ಇದೆ.. ಈಗ ನಿಷೇಧ ಮಾಡಲು ನಿಮಗೇನ್ರೀ ರೋಗ ಎಂದು ಶ್ರೀರಾಮಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹರ್ಷ ಒಬ್ಬ ಅಪ್ಪಟ ಹಿಂದು ಕಾರ್ಯಕರ್ತ. ಕಳೆದ ಐದು ವರ್ಷಗಳಿಂದ ಆತ ಗೋರಕ್ಷಣೆ, ಹಿಂದು ಪರ ಕೆಲಸ ಮಾಡಿಕೊಂಡು ಬಂದಿದ್ದ. ಒಬ್ಬ ಬಡ ಟೈಲರನ ಒಬ್ಬ ಮಗ. ಆತನನ್ನು ಗುರಿಯಾಗಿಸ್ಕೊಂಡು ಹತ್ಯೆ ಮಾಡಿದ್ದಾರೆ. ಹರ್ಷನನ್ನು ಕೊಲೆ ಮಾಡುವುದಕ್ಕೆ ಹಲವು ಬಾರಿ ಪ್ರಯತ್ನ ನಡೆದಿತ್ತು. ದುಷ್ಕರ್ಮಿಗಳು ನಿನ್ನೆ ರಾತ್ರಿ ಹೊಂಚು ಹಾಕಿ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಬೇರಾವುದೇ ವೈಯಕ್ತಿಕ ಕಾರಣಗಳಿಲ್ಲ. ಹಿಜಾಬ್ ಗಲಾಟೆಯ ಹಿಂದಿನ ಶಕ್ತಿಗಳೇ ಈ ಕೊಲೆಯನ್ನು ಮಾಡಿದ್ದಾರೆ.


ಇಂಥ ಕೊಲೆ ಸರಣಿ ಮುಂದೆ ನಡೀಬಾರ್ದು. ಇದಕ್ಕಾಗಿ ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಿ. ಬಿಜೆಪಿಗೆ ತಾಕತ್ತಿದ್ದರೆ ಇದನ್ನು ಮಾಡಿ ಎಂದು ಸವಾಲು ಹಾಕುತ್ತೇನೆ. ಪಾಪದ ಕಾರ್ಯಕರ್ತರನ್ನು ಬಲಿ ಕೊಡಬೇಡಿ. ಕೂಡಲೇ ಪ್ರಕರಣದ ಹಿಂದಿನ ಆರೋಪಿಗಳನ್ನು ಬಂಧಿಸಿ. ಅವರನ್ನು ಜಾಮೀನಿನಲ್ಲಿ ಹೊರಬರದಂತೆ ಜೈಲಿನಲ್ಲಿ ಕೂಡಿ ಹಾಕಿ. ಅಥವಾ ಅವರನ್ನು ಎನ್ಕೌಂಟರ್ ಮಾಡಿ, ಮುಂದೆ ಈ ರೀತಯ ಅಸಹನೀಯ ಸ್ಥಿತಿ ಮರುಕಳಿಸಬಾರದು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.

ಬಿಜೆಪಿಯವ್ರೇ ಸೇರಿ 25 ಲಕ್ಷ ಪರಿಹಾರ ಕೊಡಿ :
ಅಲ್ಲದೆ, ಹರ್ಷನ ಬಡ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಸರಕಾರದಿಂದ ಆಗದಿದ್ದರೆ ನಿಮ್ಮ ಜೇಬಿನಿಂದ ತೆಗೆದು ಕೊಡಿ. ಮಾಜಿ ಮುಖ್ಯಮಂತ್ರಿಯ ಊರಿನಲ್ಲಿ ಈ ಕೊಲೆಯಾಗಿದೆ. ಅಲ್ಲಿಯೇ ಗೃಹ ಸಚಿವರು ಇದ್ದಾರೆ. ಸಂಸದ ಇದ್ದಾರೆ. ಇನ್ನೊಬ್ಬ ಈಶ್ವರಪ್ಪ ಅನ್ನುವ ಸಚಿವನೂ ಇದ್ದಾರೆ. ಇವರೆಲ್ಲ ಸೇರಿ ಪರಿಹಾರ ಕೊಡಲಿ. ಇಂಥ ಜಾಗದಲ್ಲಿ ಒಬ್ಬ ಬಡಪಾಯಿ ಕಾರ್ಯಕರ್ತನ ಕೊಲೆಯಾಗುತ್ತದೆ ಎಂದರೆ ಇವರೇನು ಮಾಡುತ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುತಾಲಿಕ್, ಈ ಮಾತುಗಳನ್ನು ಹೇಳಿದ್ದಾರೆ.
Pramod Muthalik Reacts over Shivamogga Murder, Slams BJP says why cant PFI and SDPI be banned
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm