ಬ್ರೇಕಿಂಗ್ ನ್ಯೂಸ್
21-02-22 03:25 pm HK News Desk ಕರ್ನಾಟಕ
ಬೆಂಗಳೂರು, ಫೆ.21: ಪಿಎಫ್ಐ, ಎಸ್ಡಿಪಿಐ ಕಾರ್ಯಕರ್ತರ ಗೂಂಡಾ ವರ್ತನೆಗೆ ಇನ್ನೆಷ್ಟು ಕಾರ್ಯಕರ್ತರು ಬಲಿಯಾಗಬೇಕ್ರೀ.. ಕಳೆದ ಬಾರಿ ನೀವು ವಿರೋಧ ಪಕ್ಷದಲ್ಲಿದ್ದಾಗ ಬ್ಯಾನ್ ಮಾಡುವಂತೆ ಆಗ್ರಹ ಮಾಡುತ್ತಿದ್ದೀರಲ್ಲಾ.. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರ ಇದೆ.. ಈಗ ನಿಷೇಧ ಮಾಡಲು ನಿಮಗೇನ್ರೀ ರೋಗ ಎಂದು ಶ್ರೀರಾಮಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹರ್ಷ ಒಬ್ಬ ಅಪ್ಪಟ ಹಿಂದು ಕಾರ್ಯಕರ್ತ. ಕಳೆದ ಐದು ವರ್ಷಗಳಿಂದ ಆತ ಗೋರಕ್ಷಣೆ, ಹಿಂದು ಪರ ಕೆಲಸ ಮಾಡಿಕೊಂಡು ಬಂದಿದ್ದ. ಒಬ್ಬ ಬಡ ಟೈಲರನ ಒಬ್ಬ ಮಗ. ಆತನನ್ನು ಗುರಿಯಾಗಿಸ್ಕೊಂಡು ಹತ್ಯೆ ಮಾಡಿದ್ದಾರೆ. ಹರ್ಷನನ್ನು ಕೊಲೆ ಮಾಡುವುದಕ್ಕೆ ಹಲವು ಬಾರಿ ಪ್ರಯತ್ನ ನಡೆದಿತ್ತು. ದುಷ್ಕರ್ಮಿಗಳು ನಿನ್ನೆ ರಾತ್ರಿ ಹೊಂಚು ಹಾಕಿ ಕೊಲೆ ಮಾಡಿದ್ದಾರೆ. ಈ ಕೊಲೆಗೆ ಬೇರಾವುದೇ ವೈಯಕ್ತಿಕ ಕಾರಣಗಳಿಲ್ಲ. ಹಿಜಾಬ್ ಗಲಾಟೆಯ ಹಿಂದಿನ ಶಕ್ತಿಗಳೇ ಈ ಕೊಲೆಯನ್ನು ಮಾಡಿದ್ದಾರೆ.


ಇಂಥ ಕೊಲೆ ಸರಣಿ ಮುಂದೆ ನಡೀಬಾರ್ದು. ಇದಕ್ಕಾಗಿ ಪಿಎಫ್ಐ, ಎಸ್ಡಿಪಿಐ ಬ್ಯಾನ್ ಮಾಡಿ. ಬಿಜೆಪಿಗೆ ತಾಕತ್ತಿದ್ದರೆ ಇದನ್ನು ಮಾಡಿ ಎಂದು ಸವಾಲು ಹಾಕುತ್ತೇನೆ. ಪಾಪದ ಕಾರ್ಯಕರ್ತರನ್ನು ಬಲಿ ಕೊಡಬೇಡಿ. ಕೂಡಲೇ ಪ್ರಕರಣದ ಹಿಂದಿನ ಆರೋಪಿಗಳನ್ನು ಬಂಧಿಸಿ. ಅವರನ್ನು ಜಾಮೀನಿನಲ್ಲಿ ಹೊರಬರದಂತೆ ಜೈಲಿನಲ್ಲಿ ಕೂಡಿ ಹಾಕಿ. ಅಥವಾ ಅವರನ್ನು ಎನ್ಕೌಂಟರ್ ಮಾಡಿ, ಮುಂದೆ ಈ ರೀತಯ ಅಸಹನೀಯ ಸ್ಥಿತಿ ಮರುಕಳಿಸಬಾರದು ಎಂದು ಮುತಾಲಿಕ್ ಆಗ್ರಹ ಮಾಡಿದ್ದಾರೆ.

ಬಿಜೆಪಿಯವ್ರೇ ಸೇರಿ 25 ಲಕ್ಷ ಪರಿಹಾರ ಕೊಡಿ :
ಅಲ್ಲದೆ, ಹರ್ಷನ ಬಡ ಕುಟುಂಬಕ್ಕೆ ರಾಜ್ಯ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಸರಕಾರದಿಂದ ಆಗದಿದ್ದರೆ ನಿಮ್ಮ ಜೇಬಿನಿಂದ ತೆಗೆದು ಕೊಡಿ. ಮಾಜಿ ಮುಖ್ಯಮಂತ್ರಿಯ ಊರಿನಲ್ಲಿ ಈ ಕೊಲೆಯಾಗಿದೆ. ಅಲ್ಲಿಯೇ ಗೃಹ ಸಚಿವರು ಇದ್ದಾರೆ. ಸಂಸದ ಇದ್ದಾರೆ. ಇನ್ನೊಬ್ಬ ಈಶ್ವರಪ್ಪ ಅನ್ನುವ ಸಚಿವನೂ ಇದ್ದಾರೆ. ಇವರೆಲ್ಲ ಸೇರಿ ಪರಿಹಾರ ಕೊಡಲಿ. ಇಂಥ ಜಾಗದಲ್ಲಿ ಒಬ್ಬ ಬಡಪಾಯಿ ಕಾರ್ಯಕರ್ತನ ಕೊಲೆಯಾಗುತ್ತದೆ ಎಂದರೆ ಇವರೇನು ಮಾಡುತ್ತಿದ್ದಾರೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುತಾಲಿಕ್, ಈ ಮಾತುಗಳನ್ನು ಹೇಳಿದ್ದಾರೆ.
Pramod Muthalik Reacts over Shivamogga Murder, Slams BJP says why cant PFI and SDPI be banned
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm