ಬ್ರೇಕಿಂಗ್ ನ್ಯೂಸ್
19-09-20 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡ್ರಗ್ ನಂಟಿನಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರೇ ಅನ್ನುವ ಅನುಮಾನ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮುಸ್ಲಿಂ ಮತಕ್ಕೆ ಮತಾಂತರಗೊಂಡಿದ್ದರು ಅನ್ನೋ ಮಾತು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಬೆಂಗಳೂರಿನ ದಾರುಲ್ ಉಲೂಮ್ ಶಾ ವಲಿಯುಲ್ಲಾ ಎನ್ನುವ ಮದ್ರಸ ಸಂಜನಾ ಮತಾಂತರ ಆಗಿರುವ ಬಗ್ಗೆ 2018ರಲ್ಲಿ ತನ್ನ ಲೆಟರ್ ಹೆಡ್ ನಲ್ಲಿ ಬಿಡುಗಡೆ ಮಾಡಿದ್ದ ನೋಟೀಸ್ ಬಹಿರಂಗವಾಗಿದೆ.
ಮಿಸ್ ಮನೋಹರ್ ಅರ್ಚನಾ ಗಲ್ರಾನಿ, ನಂ. 130, 5ನೇ ಕ್ರಾಸ್, ವರ್ಮಾಸ್ ನ್ಯೂ ಲೇಔಟ್, ಸಿಂಫೊನಿ ಅಪಾರ್ಟ್ಮೆಂಟ್, ಹೆಬ್ಬಾಳ, ಕೆಂಪಾಪುರ ದಾಸರಹಳ್ಳಿ ರೋಡ್, ಭುವನೇಶ್ವರಿ ನಗರ, ಬೆಂಗಳೂರು ಈ ವಿಳಾಸ ಹೊಂದಿರುವ ಸಂಜನಾ 2018 ಅಕ್ಟೋಬರ್ 9ರಂದು ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ. ಅರ್ಚನಾ ಗಲ್ರಾನಿ(ಸಂಜನಾ ಒರಿಜಿನಲ್ ಹೆಸರು) ಇನ್ನು ಮಿಸ್ ಮಾಹಿರಾ ಎಂಬುದಾಗಿ ಹೆಸರು ಬದಲಿಸಿಕೊಂಡಿದ್ದಾರೆ. ಆಕೆಯ ಸ್ವ ಇಚ್ಛೆಯಿಂದ ಸಂಜನಾ ಮತಾಂತರ ಆಗಿರುವುದಾಗಿ ದಾರುಲ್ ಉಲೂಮ್ ಶಾ ವಲೀಯುಲ್ಲಾ ಮದ್ರಸದವರು, ಸಾರ್ವಜನಿಕರ ಗಮನಕ್ಕೆ ಎಂದು ನೋಟಿಸ್ ನೀಡಿದ್ದರು. ಈ ನೋಟಿಸ್ ಈಗ ಜಾಲತಾಣದಲ್ಲಿ ಓಡಾಡುತ್ತಿದ್ದು ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದರೇ ಎನ್ನುವ ಪ್ರಶ್ನೆಗಳನ್ನು ಜನ ಕೇಳುತ್ತಿದ್ದಾರೆ.

ಸಂಜನಾಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಆಕೆ ಬೆಂಗಳೂರಿನ ಅಝೀಜ್ ಪಾಷಾ ಎಂಬ ವೈದ್ಯನನ್ನು ಮದುವೆಯಾಗಿದ್ದಾಳೆ ಎಂಬ ಮಾಹಿತಿ ಹೊರಬಂದಿತ್ತು. ಮದುವೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಹರಿದಾಡಿದ್ದವು. ಎರಡು ವರ್ಷಗಳ ಹಿಂದೆ ಆತನ ಜೊತೆ ಸಂಜನಾ ಮದುವೆಯಾಗಿತ್ತು ಎಂದು ಎನ್ನಲಾಗಿತ್ತು. ಈಗ ಆಕೆ ಮುಸ್ಲಿಂ ಆಗಿ ಮತಾಂತರ ಆಗಿದ್ದಾಳೆ ಎನ್ನೋದು ಖಚಿತವಾಗುತ್ತಿದೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm