ಬ್ರೇಕಿಂಗ್ ನ್ಯೂಸ್
22-02-22 02:50 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿಯೇ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಆದರೆ ಸೋಮವಾರ ಸಚಿವರು, ಬಿಜೆಪಿ ನಾಯಕರು ಸೇರಿ ಮೆರವಣಿಗೆ ಮಾಡಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಗಲಾಟೆ. ಇವರೇ ಸೆಕ್ಷನ್ ಉಲ್ಲಂಘಿಸಿ, ಕಲ್ಲು ತೂರಾಟ ಮಾಡಿಸಿ, ಅಲ್ಲಿನ ಗಲಾಟೆಗೆ ಕಾರಣವಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಘಟನೆಗಳಿಗೆ ಹೊಣೆ ಯಾರು ? ಮಾಜಿ ಸಿಎಂ ಯಡಿಯೂರಪ್ಪ, ಹೋಮ್ ಮಿನಿಸ್ಟರ್, ಈಶ್ವರಪ್ಪ ಅದೇ ಜಿಲ್ಲೆಯವರು. 144 ಸೆಕ್ಷನ್ ಜಾರಿ ಇರುವಾಗ ಮೆರವಣಿಗೆ ಮಾಡಲು ಯಾಕೆ ಅವಕಾಶ ಕೊಟ್ಟರು. ಸಂಸದ ರಾಘವೇಂದ್ರ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಹೀಗಾಗಿ ಇದನ್ನು ಸರ್ಕಾರದ ಪ್ರಾಯೋಜಿತ ಮೆರವಣಿಗೆ ಎನ್ನಬೇಕು. ಮೆರವಣಿಗೆಯಲ್ಲಿ ಇವರ ನಡುವೆಯೇ ಕಲ್ಲು ತೂರಾಟ ನಡೆಯುತ್ತದೆ. ಒಬ್ಬ ಸಚಿವ, ಒಬ್ಬ ಸಂಸದ ಇದ್ದೂ ಸೆಕ್ಷನ್ ಉಲ್ಲಂಘನೆ ಆಗಿದೆ. ಸರ್ಕಾರದ ಯಾರದ್ದು ಇರೋದು ? ಶಿವಮೊಗ್ಗದಲ್ಲಿ ಆಸ್ತಿ ಪಾಸ್ತಿಗೆ ಹಾನಿಯಾಗಿದ್ದವರೇ, ಅದಕ್ಕೆ ಬಿಜೆಪಿ, ಬಜರಂಗದಳ ಕಾರಣ. ದೊನ್ನೆ,ಕತ್ತಿ, ತಲ್ವಾರ್ ಇಡಕೊಂಡು ಮೆರವಣಿಗೆ ಮಾಡಿದ್ದಾರೆ. ಇದು ಮಾನವೀಯತೆ ಇರುವ ಸರ್ಕಾರನಾ.. ಇದು ಗೂಂಡಾಗಳ ಸರ್ಕಾರ. ಒಬ್ಬ ಸಚಿವರೇ ಸೆಕ್ಷನ್144 ಗೌರವಿಸದಿದ್ದರೇ ಇದನ್ನು ಸರ್ಕಾರ ಎನ್ನಲಿಕ್ಕಾಗುತ್ತಾ.. ಇದಕ್ಕೆಲ್ಲ ನೇರವಾಗಿ ಈಶ್ವರಪ್ಪ ಹಾಗೂ ಬಿವೈ ರಾಘವೇಂದ್ರ ಹೊಣೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸರ್ಕಾರದ ಇವರದ್ದೇ ಇದೆ. ಕೊಲೆ ಘಟನೆ ಹಿಂದೆ ಸಿಎಫ್ಐ, ಎಸ್ಡಿಪಿಐ ಬಗ್ಗೆ ಸಾಕ್ಷಿಗಳು ಇದ್ದರೆ ಬ್ಯಾನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಸಾರ್ವಜನಿಕರ ಆಸ್ತಿ ಹಾನಿಯಾಗಿದೆ. ಮಾಧ್ಯಮದವರ ಮೇಲೆ ಹಲ್ಲೆ ಆಗಿದೆ. ಇದು ಸರ್ಕಾರದ ಜವಬ್ದಾರಿನಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಈಶ್ವರಪ್ಪ ಕೇಸರಿ ಬಾವುಟ ಹಾರಿಸ್ತೇವೆ ಎಂಬ ಹೇಳಿಕೆಯ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಷ್ಟ್ರೀಯ ಖಾಸಗಿ ವಾಹಿನಿಗೆ ಸಂದರ್ಶನ ಕೊಟ್ಟಿದ್ದಾರೆ. ಈಶ್ವರಪ್ಪ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ಆಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ನಾವು ಒತ್ತಾಯ ಮಾಡ್ತೇವೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಆಗಬೇಕು. ಈ ಬಗ್ಗೆ ಸಂಜೆ ರಾಜ್ಯಪಾಲರನ್ನ ಭೇಟಿ ಮಾಡ್ತೇವೆ. ವಿಧಾನಸೌಧದಿಂದ ರಾಜಭವನಕ್ಕೆ ವಾಕ್ ಮಾಡುತ್ತೇವೆ. ಈಶ್ವರಪ್ಪ ಅವರನ್ನು ಪದಚ್ಯುತಿ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು ಸಿದ್ದರಾಮಯ್ಯ.
Eshwarappa violated Section 144 to take Bajrang Dal activists body home, claims Siddaramaiah
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am