ಬ್ರೇಕಿಂಗ್ ನ್ಯೂಸ್
22-02-22 09:48 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 22 : ಕನ್ನಡದ ಹೆಸರಾಂತ ರೇಡಿಯೋ ನಿರೂಪಕಿ ಆರ್ ಜೆ ರಚನಾ ಇನ್ನಿಲ್ಲ. ತೀವ್ರ ಹೃದಯಾಘಾತದಿಂದ ರಚನಾ ನಿಧನ ಹೊಂದಿದ್ದಾರೆ.
ಆರ್ ಜೆ ರಚನಾ ತಮ್ಮ ಕಂಠ ಸಿರಿಯಿಂದಲೇ ಹೆಸರುವಾಸಿ ಆಗಿದ್ದರು. ರೇಡಿಯೋ ಮಿರ್ಚಿ ಮೂಲಕ ಅವರು ತಮ್ಮ ರೇಡಿಯೋ ಜಾಕಿ ಪಯಣ ಆರಂಭಿಸಿದ್ದರು. ನಂತರ ರೇಡಿಯೋ ಸಿಟಿಯಲ್ಲಿಯೂ ಅವರು ಕೆಲಸ ಮಾಡಿದ್ದಾರೆ. ಆರ್ ಜೆ ರಚನಾ ಕಾರ್ಯಕ್ರಮಗಳು ಎಂದರೆ ಅತ್ಯಂತ ಜನಪ್ರಿಯ ಆಗಿದ್ದವು. ಆದರೆ ಕಿರಿವಯಸ್ಸಿನಲ್ಲೇ ರಚನಾ ಅವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಕೇವಲ ರೇಡಿಯೋ ಜಾಕಿ ಆಗಿ ಮಾತ್ರ ಅಲ್ಲಾ, ಅವರು ಹಲವಾರು ವೇದಿಕೆ ಕಾರ್ಯಕ್ರಮಗಳನ್ನು ಕೂಡ ನಿರೂಪಣೆ ಮಾಡಿದ್ದಾರೆ, ಕನ್ನಡ ಚಿತ್ರರಂಗದ ಹಲವಾರು ತಾರೆಯರ ಸಂದರ್ಶನ ಮಾಡಿ ರಚನಾ ಸೈ ಎನಿಸಿಕೊಂಡಿದ್ದಾರೆ.
ಆರ್ ಜೆ ಆಗಿ ಹೆಸರು ಮಾಡಿದ್ದ ರಚನಾ ಅವರು ಆರೇಳು ವರ್ಷಗಳ ಹಿಂದೆಯೇ ರೇಡಿಯೋ ಜಾಕಿ ವೃತ್ತಿಗೆ ವಿದಾಯ ಹೇಳಿದ್ದರು. ನಂತರ ಅವರು ಸ್ನೇಹಿತರ ವಲಯದಿಂದಲೂ ದೂರ ಉಳಿದಿದ್ದರಂತೆ. ಇವರ ಅಚಾನಕ್ ಸಾವು ಆರ್ ಜೆ ವಲಯಕ್ಕೆ ಶಾಕ್ ನೀಡಿದೆ. ರಚನಾಗೆ ಹೀಗೆ ಆಗಲು ಹೇಗೆ ಸಾಧ್ಯ ಎಂದು ಎಲ್ಲರು ಶಾಕ್ ಆಗಿದ್ದಾರೆ.
ಅಷ್ಟೇ ಅಲ್ಲ ರಚನಾ ಅವರು ತುಂಬಾನೇ ಡಿಪ್ರೆಷನ್ನಲ್ಲಿ ಇದ್ದರಂತೆ. ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನುತ್ತಿದೆ ರಚನಾ ಸ್ನೇಹಿತರ ಬಳಗ. ಸದ್ಯ ಕಾರ್ಡಿಯಾ ಕರೆಸ್ಟ್ನಿಂದ ಅವರು ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಖಿನ್ನತೆಯಿಂದ ಏನಾದರು ಹೆಚ್ಚು ಕಡಿಮೆ ಆಗಿರಬೇಕು ಎನ್ನುತ್ತಿದೆ ಸ್ನೇಹಿತ ವಲಯ. ಶಾಕ್ಗೆ ಒಳಗಾದ ಸ್ನೇಹಿತ ವರ್ಗ ದುಖಃದಿಂದಲೇ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.
ಆರ್ಜೆ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕುಟುಂಬಸ್ಥರು ರಚನಾ ಅವರ ಅಂಗಾಂಗವನ್ನು ದಾನ ಮಾಡಿದ್ದಾರೆ. ಮುಂಜಾನೆ ಹೃದಯಘಾತವಾಗಿದ್ದ ಕಾರಣ ಅಪೋಲೊ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು. 12 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಚನಾ ಅವರ ನಿಧನಕ್ಕೆ ಚಿತ್ರರಂಗ, ಸಹದ್ಯೋಗಿಗಳು, ಅಪಾರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
Popular Kannada Radio Jockey, Rachana died of a cardiac arrest on Tuesday (February 22) at noon. She was 39. According to reports, Rachana complained of chest pain at her flat in JP Nagar and she was rushed to a nearby hospital where she was declared brought dead.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm