ಬ್ರೇಕಿಂಗ್ ನ್ಯೂಸ್
22-02-22 11:19 pm HK Desk news ಕರ್ನಾಟಕ
ಶಿವಮೊಗ್ಗ, ಫೆ.22 : ಈ ರೀತಿ ಸರಣಿಯಾಗಿ ಹಿಂದು ಕಾರ್ಯಕರ್ತರ ಕೊಲೆಯಾಗುವುದನ್ನು ನೋಡಿದರೆ, ನಮ್ಮ ರಕ್ಷಣೆಯನ್ನು ನೀವು ಮಾಡುತ್ತೀರಾ.. ಇಲ್ಲಾ ನಾವೇ ಮಾಡಿಕೊಳ್ಳಬೇಕಾ ಎಂಬ ಪ್ರಶ್ನೆ ಬರುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಗೃಹ ಸಚಿವರನ್ನು ಪ್ರಶ್ನೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಮನೆಗೆ ಆಗಮಿಸಿ ಮಾಧ್ಯಮಕ್ಕೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳೆಯಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದುಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಭಾರತದಲ್ಲಿ ವಹಾಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. 2% ಇದ್ದದ್ದು, 25% ಆಗಿದೆ ಎಂದು ಮುಸಲ್ಮಾನರೇ ಹೇಳುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಸಂಗತಿ. ಮುಂದೆ ಇದರಿಂದ ದಂಗೆ ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಹಾಗಾಗಿ ನೀವು ನಮ್ಮನ್ನು ರಕ್ಷಣೆ ಮಾಡುತ್ತೀರಾ ಅಥವಾ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕೋ ಎಂದು ಪ್ರಶ್ನಿಸುತ್ತೇನೆ. ನಿನ್ನೆ ಹತ್ಯೆಯಾಗಿದೆ. ಇಂದು ಶಾಂತವಾಗಿದೆ ಎಂಬುವುದು ಖುಷಿ ಪಡುವ ವಿಚಾರವೋ, ಬೇಸರದ ವಿಚಾರವೋ ಗೊತ್ತಿಲ್ಲ. ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆ ಅಂದರೆ ಮಾತ್ರ ಇದನ್ನು ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತದೆ ಎಂದು ಹೇಳಿದ್ದಾರೆ.
ಹಿಂದೂ ಹೆಸರು ಹೇಳಿಕೊಂಡು ಆಚೆ ಬರುವವರು ಹೆದರಿಕೊಳ್ಳಬೇಕು. ಹಿಂದೂಗಳು ಮನೆಯಲ್ಲಿ ಇರಬೇಕು ಎಂಬುವುದು ಮುಸಲ್ಮಾನರ ಉದ್ದೇಶ. ಅಕ್ಬರ್, ಬಾಬರ್ ಅದೇ ಕಾಲಕ್ಕೆ ನಾವು ಮರಳುತ್ತಿದ್ದೇವೆ ಎಂದರೆ ಏನು ಅರ್ಥ. ಈ ವಿಚಾರ ಇನ್ನೂ ವ್ಯಾಪಕವಾಗಬೇಕು. ಸರ್ಕಾರ ಏನೇ ಹೇಳಿದರೂ ಯಾವುದು ಸಮಾಧಾನ ನೀಡುವುದಿಲ್ಲ. ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.
Chakravarti Sulibele questions govt of safety after murder of Harsha in Shivamogga. speaking to media persons after meeting the family he slammed the govt questioning if Hindus Youths should safeguard themselves or not.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm