ಬ್ರೇಕಿಂಗ್ ನ್ಯೂಸ್
22-02-22 11:19 pm HK Desk news ಕರ್ನಾಟಕ
ಶಿವಮೊಗ್ಗ, ಫೆ.22 : ಈ ರೀತಿ ಸರಣಿಯಾಗಿ ಹಿಂದು ಕಾರ್ಯಕರ್ತರ ಕೊಲೆಯಾಗುವುದನ್ನು ನೋಡಿದರೆ, ನಮ್ಮ ರಕ್ಷಣೆಯನ್ನು ನೀವು ಮಾಡುತ್ತೀರಾ.. ಇಲ್ಲಾ ನಾವೇ ಮಾಡಿಕೊಳ್ಳಬೇಕಾ ಎಂಬ ಪ್ರಶ್ನೆ ಬರುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಗೃಹ ಸಚಿವರನ್ನು ಪ್ರಶ್ನೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಮನೆಗೆ ಆಗಮಿಸಿ ಮಾಧ್ಯಮಕ್ಕೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳೆಯಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದುಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಭಾರತದಲ್ಲಿ ವಹಾಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. 2% ಇದ್ದದ್ದು, 25% ಆಗಿದೆ ಎಂದು ಮುಸಲ್ಮಾನರೇ ಹೇಳುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಸಂಗತಿ. ಮುಂದೆ ಇದರಿಂದ ದಂಗೆ ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.
ಗೃಹ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಹಾಗಾಗಿ ನೀವು ನಮ್ಮನ್ನು ರಕ್ಷಣೆ ಮಾಡುತ್ತೀರಾ ಅಥವಾ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕೋ ಎಂದು ಪ್ರಶ್ನಿಸುತ್ತೇನೆ. ನಿನ್ನೆ ಹತ್ಯೆಯಾಗಿದೆ. ಇಂದು ಶಾಂತವಾಗಿದೆ ಎಂಬುವುದು ಖುಷಿ ಪಡುವ ವಿಚಾರವೋ, ಬೇಸರದ ವಿಚಾರವೋ ಗೊತ್ತಿಲ್ಲ. ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆ ಅಂದರೆ ಮಾತ್ರ ಇದನ್ನು ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತದೆ ಎಂದು ಹೇಳಿದ್ದಾರೆ.
ಹಿಂದೂ ಹೆಸರು ಹೇಳಿಕೊಂಡು ಆಚೆ ಬರುವವರು ಹೆದರಿಕೊಳ್ಳಬೇಕು. ಹಿಂದೂಗಳು ಮನೆಯಲ್ಲಿ ಇರಬೇಕು ಎಂಬುವುದು ಮುಸಲ್ಮಾನರ ಉದ್ದೇಶ. ಅಕ್ಬರ್, ಬಾಬರ್ ಅದೇ ಕಾಲಕ್ಕೆ ನಾವು ಮರಳುತ್ತಿದ್ದೇವೆ ಎಂದರೆ ಏನು ಅರ್ಥ. ಈ ವಿಚಾರ ಇನ್ನೂ ವ್ಯಾಪಕವಾಗಬೇಕು. ಸರ್ಕಾರ ಏನೇ ಹೇಳಿದರೂ ಯಾವುದು ಸಮಾಧಾನ ನೀಡುವುದಿಲ್ಲ. ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.
Chakravarti Sulibele questions govt of safety after murder of Harsha in Shivamogga. speaking to media persons after meeting the family he slammed the govt questioning if Hindus Youths should safeguard themselves or not.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm