ಬ್ರೇಕಿಂಗ್ ನ್ಯೂಸ್
22-02-22 11:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.23 : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೂ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಸುಪಾರಿ ಕೊಟ್ಟವರ ನಡುವೆ ಏನೋ ಸಂಬಂಧ ಇದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂಶಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪಾರಿ ಕೊಟ್ಟವರಿಗೆ ಹಾಗೂ ಈಶ್ವರಪ್ಪಗೂ ಏನೋ ಸಂಬಂಧ ಇದೆ. ಮೊದಲು ಅದರ ಬಗ್ಗೆ ತನಿಖೆ ಮಾಡಲಿ. ಈಶ್ವರಪ್ಪನವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಿ, ಸತ್ಯ ಹೊರಗಡೆ ಬರುತ್ತೆ. ಸಂಘ ಪರಿವಾರದವರು ಈವರೆಗೆ 36 ಕೊಲೆ ಮಾಡಿದ್ದಾರೆ. 13 ಜನ ಹಿಂದೂ ಯುವಕರ ಕೊಲೆಯಲ್ಲಿ ಸಂಘ ಪರಿವಾರದ ಪಾತ್ರ ಇದೆ ಎಂದು ಆರೋಪ ಮಾಡಿದರು.
ಶಿವಮೊಗ್ಗ ಯುವಕನ ಕೊಲೆ ಪ್ರಕರಣದ ನಂತರ ಆದ ಬೆಳವಣಿಗೆಗಳು ನಿಜಕ್ಕೂ ಖಂಡನೀಯ. ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೊಸದೇನಲ್ಲ. ಮಾಧ್ಯಮದ ವರದಿಯ ಪ್ರಕಾರ ಈ ಹತ್ಯೆಯಾದ ವ್ಯಕ್ತಿ ರೌಡಿಶೀಟರ್ ಅಂತ ಗೊತ್ತಾಗಿದೆ. ಆದರೆ ಸರ್ಕಾರದ ಜವಾಬ್ದಾರಿಯುತವಾದ ಸ್ಥಾನದಲ್ಲಿರುವವರ ಮಾತುಗಳು ಖಂಡನೀಯ. ಕೊಲೆ ನಡೆದ ತಕ್ಷಣ ಪೊಲೀಸರ ತನಿಖೆ ಆರಂಭವಾಗುವ ಮುನ್ನ ಸಚಿವ ಈಶ್ವರಪ್ಪ, ರಾಘವೇಂದ್ರ, ಪ್ರತಾಪ್ ಸಿಂಹ ಮುಸ್ಲಿಮರ ತಲೆಗೆ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇವರ ಪ್ರಚೋದನಕಾರಿ ಹೇಳಿಕೆಯಿಂದ ಮುಸ್ಲಿಂ ಮನೆಯ ಮೇಲೆ, ಅಂಗಡಿಯ ಮೇಲೆ, ವಾಹನದ ಮೇಲೆ ಬೆಂಕಿ ಹಚ್ಚಲಾಗಿದೆ. 143 ಸೆಕ್ಷನ್ ಇದ್ರೂ ಮೆರವಣಿಗೆ ಮಾಡಿದ್ರು. ಪೊಲೀಸರ ಕಣ್ಣಮುಂದೆಯೇ ಈಶ್ವರಪ್ಪ ಕಡೆಯ ಐನೂರು ಜನ ಹುಡುಗರು ದಾಂಧಲೆ ಮಾಡ್ತಾರೆ. ಕಫ್ರ್ಯೂ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿರೋದು ಈಶ್ವರಪ್ಪ, ಈಶ್ವರಪ್ಪ – ಎ1, ರಾಘವೇಂದ್ರ, ಗೃಹಸಚಿವರು ಇವರೆಲ್ಲ ನೇರ ಹೊಣೆ. ಎರಡು ದಿನದ ಮುಂಚೆ ಶಿವಮೊಗ್ಗದಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗಿತ್ತು ಎಂದರು.
ಹಿಜಾಬ್ಗೂ ಕೊಲೆಗೂ ನೇರ ಲಿಂಕ್ ಬಗ್ಗೆ ನಾನೇನು ಪ್ರತಿಕ್ರಿಯೆ ಕೊಡಲಾರೆ. ತನಿಖೆ ನಡೆಯುತ್ತಿದೆ, ನೈಜ್ಯ ಕಾರಣ ಬರಲಿ. ನಾಯಕರ ಒತ್ತಡಕ್ಕೆ ಮಣಿದು ಅಮಾಯಕರನ್ನು ಬಂಧಿಸೋದು ಅಲ್ಲ. ಹಿಜಬ್ ವಿಚಾರದಲ್ಲಿ ಸರ್ಕಾರ ವೈಫಲ್ಯವಾಗಿದೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳೋಕೆ ಈ ರೀತಿಯ ಕೆಲಸ ಮಾಡಿರಬಹುದು ಎಂದು ಕಿಡಿಕಾರಿದರು.
SDPI President Abdul Majeed Garam has said that he has something to do with minister KS Eshwarappa and Supari in connection with the murder of a Hindu activist in Shimoga.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm