ಬ್ರೇಕಿಂಗ್ ನ್ಯೂಸ್
22-02-22 11:31 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.23 : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೂ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಸುಪಾರಿ ಕೊಟ್ಟವರ ನಡುವೆ ಏನೋ ಸಂಬಂಧ ಇದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂಶಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪಾರಿ ಕೊಟ್ಟವರಿಗೆ ಹಾಗೂ ಈಶ್ವರಪ್ಪಗೂ ಏನೋ ಸಂಬಂಧ ಇದೆ. ಮೊದಲು ಅದರ ಬಗ್ಗೆ ತನಿಖೆ ಮಾಡಲಿ. ಈಶ್ವರಪ್ಪನವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಿ, ಸತ್ಯ ಹೊರಗಡೆ ಬರುತ್ತೆ. ಸಂಘ ಪರಿವಾರದವರು ಈವರೆಗೆ 36 ಕೊಲೆ ಮಾಡಿದ್ದಾರೆ. 13 ಜನ ಹಿಂದೂ ಯುವಕರ ಕೊಲೆಯಲ್ಲಿ ಸಂಘ ಪರಿವಾರದ ಪಾತ್ರ ಇದೆ ಎಂದು ಆರೋಪ ಮಾಡಿದರು.
ಶಿವಮೊಗ್ಗ ಯುವಕನ ಕೊಲೆ ಪ್ರಕರಣದ ನಂತರ ಆದ ಬೆಳವಣಿಗೆಗಳು ನಿಜಕ್ಕೂ ಖಂಡನೀಯ. ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೊಸದೇನಲ್ಲ. ಮಾಧ್ಯಮದ ವರದಿಯ ಪ್ರಕಾರ ಈ ಹತ್ಯೆಯಾದ ವ್ಯಕ್ತಿ ರೌಡಿಶೀಟರ್ ಅಂತ ಗೊತ್ತಾಗಿದೆ. ಆದರೆ ಸರ್ಕಾರದ ಜವಾಬ್ದಾರಿಯುತವಾದ ಸ್ಥಾನದಲ್ಲಿರುವವರ ಮಾತುಗಳು ಖಂಡನೀಯ. ಕೊಲೆ ನಡೆದ ತಕ್ಷಣ ಪೊಲೀಸರ ತನಿಖೆ ಆರಂಭವಾಗುವ ಮುನ್ನ ಸಚಿವ ಈಶ್ವರಪ್ಪ, ರಾಘವೇಂದ್ರ, ಪ್ರತಾಪ್ ಸಿಂಹ ಮುಸ್ಲಿಮರ ತಲೆಗೆ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇವರ ಪ್ರಚೋದನಕಾರಿ ಹೇಳಿಕೆಯಿಂದ ಮುಸ್ಲಿಂ ಮನೆಯ ಮೇಲೆ, ಅಂಗಡಿಯ ಮೇಲೆ, ವಾಹನದ ಮೇಲೆ ಬೆಂಕಿ ಹಚ್ಚಲಾಗಿದೆ. 143 ಸೆಕ್ಷನ್ ಇದ್ರೂ ಮೆರವಣಿಗೆ ಮಾಡಿದ್ರು. ಪೊಲೀಸರ ಕಣ್ಣಮುಂದೆಯೇ ಈಶ್ವರಪ್ಪ ಕಡೆಯ ಐನೂರು ಜನ ಹುಡುಗರು ದಾಂಧಲೆ ಮಾಡ್ತಾರೆ. ಕಫ್ರ್ಯೂ ಹಾಗೂ ನಿಷೇಧಾಜ್ಞೆ ಉಲ್ಲಂಘಿಸಿರೋದು ಈಶ್ವರಪ್ಪ, ಈಶ್ವರಪ್ಪ – ಎ1, ರಾಘವೇಂದ್ರ, ಗೃಹಸಚಿವರು ಇವರೆಲ್ಲ ನೇರ ಹೊಣೆ. ಎರಡು ದಿನದ ಮುಂಚೆ ಶಿವಮೊಗ್ಗದಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗಿತ್ತು ಎಂದರು.
ಹಿಜಾಬ್ಗೂ ಕೊಲೆಗೂ ನೇರ ಲಿಂಕ್ ಬಗ್ಗೆ ನಾನೇನು ಪ್ರತಿಕ್ರಿಯೆ ಕೊಡಲಾರೆ. ತನಿಖೆ ನಡೆಯುತ್ತಿದೆ, ನೈಜ್ಯ ಕಾರಣ ಬರಲಿ. ನಾಯಕರ ಒತ್ತಡಕ್ಕೆ ಮಣಿದು ಅಮಾಯಕರನ್ನು ಬಂಧಿಸೋದು ಅಲ್ಲ. ಹಿಜಬ್ ವಿಚಾರದಲ್ಲಿ ಸರ್ಕಾರ ವೈಫಲ್ಯವಾಗಿದೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳೋಕೆ ಈ ರೀತಿಯ ಕೆಲಸ ಮಾಡಿರಬಹುದು ಎಂದು ಕಿಡಿಕಾರಿದರು.
SDPI President Abdul Majeed Garam has said that he has something to do with minister KS Eshwarappa and Supari in connection with the murder of a Hindu activist in Shimoga.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm