ಬ್ರೇಕಿಂಗ್ ನ್ಯೂಸ್
23-02-22 01:07 pm HK Desk news ಕರ್ನಾಟಕ
ಮೈಸೂರು, ಫೆ.23 : ಶಿವಮೊಗ್ಗ ಗಲಬೆಗೂ- ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಹರ್ಷ ಸಾವಿಗೆ ಸರ್ಕಾರದ ವೈಫಲ್ಯವೇ ಕಾರಣ. ಹರ್ಷ ಹತ್ಯೆಗೂ ಮುನ್ನ ಅಪಾಯವಿದೆ ಎಂದು ಪೊಲೀಸರಿಗೂ ಮಾಹಿತಿ ಇತ್ತು, ಅವರ ಮನೆಯವರಿಗೂ ಗೊತ್ತಿತ್ತು. ಒಬ್ಬ ಕಾರ್ಯಕರ್ತನಿಗೆ ರಕ್ಷಣೆ ಕೊಡಲು ಆಗದ ನೀವು ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಸರ್ಕಾರದ ವೈಫಲ್ಯದ ಬಗ್ಗೆ ನಿಮ್ಮವರೇ ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಸಂಸದ ಪ್ರತಾಪಸಿಂಹ ಆದಿಯಾಗಿ ಸರ್ಕಾರವನ್ನ ಸಮರ್ಥಿಸಿಕೊಳ್ಳುವವರು ಖಂಡಿಸುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರ ಬಲಿ ಕೊಟ್ಟು ನೀವು ರಾಜಕೀಯ ಮಾಡುತ್ತಿದ್ದೀರಿ. ಬಿಜೆಪಿಯ ಮಂತ್ರಿ, ಶಾಸಕರ ಮಕ್ಕಳು ಯಾರಾದರೂ ಕೋಮುಗಲಭೆಯಲ್ಲಿ ಕೊಲೆ ಆಗಿದ್ದಾರಾ..? ಸಾಮಾನ್ಯ ಜನರನ್ನು ಬಲಿಕೊಟ್ಟು ರಾಜಕೀಯ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಹರಿಹಾಯ್ದ ಎಚ್ಡಿಕೆ
ಮಂಡ್ಯಕ್ಕೆ ಬಂದು ಜೆಡಿಎಸ್ ನವರು ಮಾತ್ರ ಮಣ್ಣಿನ ಮಕ್ಕಳಾ ಎಂದು ಕೇಳಿದ್ದೀರಿ. ನೀವೇ ಮಣ್ಣಿನ ಮಕ್ಕಳು ಎಂದು ಬೋರ್ಡ್ ಹಾಕೊಂಡು ಓಡಾಡಿ. ಬೇಡ ಎಂದು ತಡೆಯುವವರು ಯಾರಿದ್ದಾರೆ. ಆದರೆ ಕನಕಪುರ ಭಾಗದಲ್ಲಿ ನಿಮ್ಮನ್ನ ಮಣ್ಣಿನ ಮಕ್ಕಳು ಎಂದು ಕರೆಯೋದಿಲ್ಲ. ಕಲ್ಲಿನ ಮಕ್ಕಳು ಎಂದಷ್ಟೇ ಕರೆಯುತ್ತಾರೆ ಎಂದು ವ್ಯಂಗ್ಯವಾಡಿರುವ ಹೆಚ್ಡಿಕೆ, ಕಾಂಗ್ರೆಸ್ ನಾಯಕರು ಸದನದಲ್ಲಿ ನಡೆಸಿದ ಹೋರಾಟಕ್ಕೆ ಬಸ್ ವಾಗ್ದಾಳಿ ನಡೆಸಿದ್ದಾರೆ. ಏನಾದ್ರೂ ದಾಖಲೇ ಇಟ್ಟು ಸಚಿವರ ರಾಜೀನಾಮೆ ಕೇಳಬೇಕಲ್ವೆ? ಪಕ್ಷ ಕಟ್ಟಿ ಬೆವರು ಸುರಿಸಿ ಬಂದ ಪ್ರತಿಪಕ್ಷ ನಾಯಕರ ವರ್ತನೆ ನೋಡುತ್ತಿದ್ದೇನೆ. ವಿಧಾನಮಂಡಲ ಇತಿಹಾಸದಲ್ಲೇ ಇದು ಕಪ್ಪು ಚುಕ್ಕೆ ಅಂತ ಸಿಎಂ ಹೇಳುತ್ತಿದ್ದಾರೆ. ಸಮವಸ್ತ್ರ ವಿವಾದ ಚರ್ಚೆ ಮಾಡುವ ಅವಕಾಶವನ್ನು ನಿರ್ನಾಮ ಮಾಡಿದ್ರು. ಜೆಡಿಎಸ್ ಚರ್ಚೆಯಲ್ಲಿ ಪಾಲ್ಗೊಳ್ಳಬಾರದೆಂದು ಬಿಜೆಪಿ, ಕಾಂಗ್ರೆಸ್ ಸೇರಿ ಹುನ್ನಾರ ನಡೆಸಿರಬಹುದು. ನಾನು ಹೊಡೆದಂಗೆ ಮಾಡ್ತೀನಿ, ನೀವು ಅಳುವಂಗೆ ಮಾಡಿ ಅನ್ನುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಸದನದಲ್ಲಿ ಹೋರಾಟ ಮಾಡಲು ಸಾಕಷ್ಟು ಅವಕಾಶ ಇತ್ತು. ಯಾವ ಪುರುಷಾರ್ಥಕ್ಕಾಗಿ ನೀವು ರಾಜ್ಯಪಾಲರ ಭೇಟಿ. ನಮ್ಮನ್ನಾದರೂ ಕೇಳಿದ್ರೆ ಹೇಳ್ತಿದ್ವಿ. ನಾನು ಸಾಕಷ್ಟು ದಾಖಲೆ ಸಮೇತ ಚರ್ಚೆಗೆ ಹೋಗಿದ್ದೆ. ಆದರೆ ಚರ್ಚೆಗೆ ಅವಕಾಶ ಸಿಗಬಾರದೆಂದು ಸದನದಲ್ಲಿ ಗೊಂದಲ ಮಾಡಿದರು. ನಿಮಗೆ ಮಾತನಾಡೋಕೆ ಅವಕಾಶ ಸಿಗಲ್ಲ ಅಂತ ರಾಜಾರೋಷವಾಗಿ ಕೆಪಿಸಿಸಿ ಅಧ್ಯಕ್ಷರು ಹೇಳುತ್ತಿದ್ದರು. ಹಾಗಾದರೆ ಇದರರ್ಥ ಏನು ಎಂದು ಕುಮಾರಸ್ವಾಮಿ ಕೇಳಿದರು.

ಒಕ್ಕಲಿಗ ಮತಗಳ ಬುಟ್ಟಿಗೆ ಕೈಹಾಕಿದ್ರೆ ಡಿಕೆಶಿ ಕುತ್ತಿಗೆ ಬರುತ್ತೆ !
ದೇವೇಗೌಡರು ಬದುಕಿರೋವರೆಗೂ ಈ ಸಮಾಜ ಅವರನ್ನು ಕೈಬಿಡಲ್ಲ. ಡಿಕೆಶಿ ಒಕ್ಕಲಿಗ ಶಾಸಕರನ್ನಾದರೂ ಸೆಳೆಯಲಿ. ಯಾರನ್ನಾದರೂ ಸೆಳೆಯಲಿ, ನಾವು ತಲೆಕೆಡಿಸಿಕೊಳ್ಳಲ್ಲ. ದೇವೇಗೌಡರು ಇರೋವರೆಗೂ ಯಾರೂ ಏನು ಮಾಡಲು ಸಾಧ್ಯವಿಲ್ಲ. ಒಕ್ಕಲಿಗ ಶಾಸಕರಿಗೆ ಗಾಳ ಹಾಕಿರೋದು ಅವರ ಕುತ್ತಿಗೆಯನ್ನೇ ಹಿಡಿಯಲಿದೆ. ಈ ಸಂಬಂಧ ನಾನು ಯಾವುದೇ ರಿವರ್ಸ್ ಆಪರೇಷನ್ ಮಾಡಲ್ಲ. ನನ್ನ ಸಂಪರ್ಕದಲ್ಲಿ ಯಾವ ಕಾಂಗ್ರೆಸ್ ಶಾಸಕರು, ಮುಖಂಡರೂ ಇಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬೆಳವಣಿಗೆ ನೋಡಿ ಆ ಪಕ್ಷದವರೇ ಬರ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
Harsha murder in Shivamogga is shows utter failure of Bjp government in Karnataka slams HD Kumaraswamy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm