ಹಿಜಾಬ್ ವಿವಾದ ಭುಗುಲೇಳಲು ಸಿಎಫ್ಐ ಪ್ರಚೋದನೆ ಕಾರಣ ; ಕಾಲೇಜು ಪರ ವಕೀಲರ ವಾದ 

23-02-22 10:45 pm       Bengaluru Correspondent   ಕರ್ನಾಟಕ

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೇಳಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಸಂಘಟನೆ ನೇರ ಕಾರಣ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಪೋಷಕರನ್ನು ಪ್ರಚೋದಿಸಿ, ಸಮವಸ್ತ್ರ ವಿಚಾರವನ್ನು ದೊಡ್ಡ ವಿವಾದವನ್ನಾಗಿ ಮಾಡಿದೆ ಎಂದು ಕಾಲೇಜು ಪರ ವಕೀಲರು ಹೈಕೋರ್ಟ್ ನಲ್ಲಿ ಬುಧವಾರ ವಾದ ಮಂಡಿಸಿದ್ದಾರೆ. ‌

ಬೆಂಗಳೂರು ಫೆ.23 : ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೇಳಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಸಂಘಟನೆ ನೇರ ಕಾರಣ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಪೋಷಕರನ್ನು ಪ್ರಚೋದಿಸಿ, ಸಮವಸ್ತ್ರ ವಿಚಾರವನ್ನು ದೊಡ್ಡ ವಿವಾದವನ್ನಾಗಿ ಮಾಡಿದೆ ಎಂದು ಕಾಲೇಜು ಪರ ವಕೀಲರು ಹೈಕೋರ್ಟ್ ನಲ್ಲಿ ಬುಧವಾರ ವಾದ ಮಂಡಿಸಿದ್ದಾರೆ. ‌

ಕಾಲೇಜು ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಎಸ್.ಎಸ್. ನಾಗಾನಂದ್, ಸಿಎಫ್ ಐ ನೋಂದಾಯಿತ ಸಂಘಟನೆಯಲ್ಲ. ವಿದ್ಯಾರ್ಥಿ ಸಂಘಟನೆ ಎಂದು ಹೇಳಲಾಗುತ್ತಿದೆ. ಅದು ಕಾಲೇಜಿಗೆ ಬಂದು ಹಿಜಾಬ್ ಗೆ ಅನುಮತಿ ನೀಡಬೇಕೆಂದು ಆಗ್ರಹ ಮಾಡಿತ್ತು. ಜೊತೆಗೆ ವಿದ್ಯಾರ್ಥಿನಿಯರಿಗೆ ಪ್ರಚೋದನೆಯನ್ನೂ ನೀಡಿದೆ. ಈ ಬಗ್ಗೆ ಸರ್ಕಾರದ ಗುಪ್ತಚರ ದಳದಲ್ಲಿ ಹೆಚ್ಚಿನ ಮಾಹಿತಿ ಸಿಗಬಹುದು ಎಂದರು.

ಆಗ ನ್ಯಾಯಪೀಠ, ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಎಜಿ, ಆ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇದೆ, ಅದನ್ನು ಮೊಹರು ಮಾಡಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದರು.

ಅದಕ್ಕೆ ಆಕ್ಷೇಪ ಎತ್ತಿದ ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹೀರ್, ಒಂದು ಸಂಘಟನೆಯನ್ನು ಗುರಿ ಮಾಡುವುದು ಸರಿಯಲ್ಲ. ಬೇರೆ ಸಂಘಟನೆಗಳು ಕೇಸರಿ ಶಾಲು ಹಂಚಿವೆ ಎಂಬ ಕುರಿತು ಮಾಧ್ಯಮಗಳಲ್ಲಿ ವರದಿ ಬಂದಿವೆ. ಹಾಗಾಗಿ ಎಲ್ಲ ಸಂಘಟನೆಗಳ ಬಗ್ಗೆಯೂ ಸರ್ಕಾರ ವರದಿ ನೀಡಲಿ ಎಂದು ಹೇಳಿದರು. 

No Outdoor Ads in Bengaluru as Karnataka High Court Stays Its Own Order

2004ರಿಂದಲೇ ಸಮವಸ್ತ್ರ ಜಾರಿ 

ಕಾಲೇಜಿನಲ್ಲಿ ಸಮವಸ್ತ್ರ ಧರಿಸುವುದು 2004ರಿಂದಲೂ ಕಡ್ಡಾಯವಾಗಿದೆ ಮತ್ತು ಅದನ್ನು ಎಲ್ಲ ವಿದ್ಯಾರ್ಥಿಗಳೂ ನಿರಂತರವಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಯಾವೊಬ್ಬ ವಿದ್ಯಾರ್ಥಿಯೂ ಅದನ್ನು ಪ್ರಶ್ನಿಸಿಲ್ಲ. ಅರ್ಜಿದಾರರೂ ಸಹ ಎರಡು ವರ್ಷಗಳಿಂದ ಆ ನಿಯಮ ಪಾಲನೆ ಮಾಡುತ್ತಿದ್ದರು. ಇದೀಗ ಇದ್ದಕ್ಕಿದ್ದಂತೆ ಆ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ನಾಗಾನಂದ್ ಹೇಳಿದರು.

ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರು, ಅಧ್ಯಾಪಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದಾರೆ, ಅವುಗಳಲ್ಲಿ ಯಾವುದೇ ಹುರುಳಿಲ್ಲ ಎಂದು ತಳ್ಳಿಹಾಕಿದ ನಾಗಾನಂದ್, ಅಧ್ಯಾಪಕರು ಎಲ್ಲ ವಿದ್ಯಾರ್ಥಿಗಳನ್ನೂ ಒಂದೇ ರೀತಿಯಲ್ಲಿ ನೋಡುತ್ತಿದ್ದಾರೆ, ಆದರೂ ತಾರತಮ್ಯದಿಂದ ನೋಡುತ್ತಿದ್ದರು, ಹೊಡೆಯುತ್ತಿದ್ದರು ಎಂದೆಲ್ಲಾ ಆರೋಪಿಸಿರುವುದನ್ನು ಒಪ್ಪಲಾಗದು ಎಂದು ತಿಳಿಸಿದರು.

ಕಾಲೇಜು ಆಡಳಿತ ಮಂಡಳಿ ಪರ ಹಿರಿಯ ನ್ಯಾಯವಾದಿ ಸಜ್ಜನ್ ಪೂವಯ್ಯ ವಾದ ಮಂಡಿಸಿದ್ದು ಜಾತ್ಯತೀತವಾಗಿ ಕೂಡಿರಬೇಕಾದ ಶಿಕ್ಷಣ ಸಂಸ್ಥೆಯಲ್ಲಿ ಬೇರೆ ಬೇರೆ ಧರ್ಮವನ್ನು ಪ್ರತಿನಿಧಿಸುವ ರೀತಿ ಉಡುಗೆ ತೊಡಲು ಅವಕಾಶ ನೀಡಲಾಗದು ಎಂದರು.

ಶಿಕ್ಷಣವನ್ನು ನೀಡುವುದು ರಾಜ್ಯದ ಜಾತ್ಯತೀತ ಚಟುವಟಿಕೆಯಾಗಿದೆ ಮತ್ತು ಜಾತ್ಯತೀತ ವಸ್ತ್ರ ಸಂಹಿತೆ ಕಾಪಾಡಿಕೊಳ್ಳುವುದು ಅತ್ಯುನ್ನತವಾದ ಪರಿಗಣನೆಯಾಗಿದೆ. ಸಂವಿಧಾನದ ವಿಧಿ 25 (2) ರ ಅಡಿಯಲ್ಲಿ ಶಾಲೆಯಲ್ಲಿ ಯಾವುದೇ ಧಾರ್ಮಿಕ ಸಂಕೇತವಿಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲು ಶಾಲೆಯು ಬಾಧ್ಯತೆ ಹೊಂದಿದೆ. ಆದರೂ ಆರ್ಟಿಕಲ್ 25 ರ ಅಡಿಯಲ್ಲಿ ಹಿಜಾಬ್ ಧರಿಸುವುದನ್ನು ಅತ್ಯಗತ್ಯ ಅಭ್ಯಾಸವೆಂದು ಪರಿಗಣಿಸಲಾಗಿದೆ ಎಂದು ಉಡುಪಿ ಸರ್ಕಾರಿ ಪಿಯು ಕಾಲೇಜು ಸಮಿತಿ ಪರವಾಗಿ ಹಿರಿಯ ವಕೀಲ ಸಜ್ಜನ್ ಪೂವಯ್ಯ ವಾದ ಮಂಡಿಸಿದರು. ತದನಂತರ ಪ್ರಕರಣದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2-30ಕ್ಕೆ ನ್ಯಾಯಪೀಠ ಮುಂದೂಡಿತು.

Naganand said the hijab row was started by some students owing allegiance to CFI. To this, the Chief Justice sought to know what the CFI stood for and what its role was. The senior counsel said the organisation was coordinating and organising protests in the state. “It is also a voluntary organisation, which is spearheading and drumbeating in favour of students (demanding wearing of hijab in classrooms),” he said.