ಬ್ರೇಕಿಂಗ್ ನ್ಯೂಸ್
24-02-22 07:17 pm HK Desk news ಕರ್ನಾಟಕ
ಹಾಸನ, ಫೆ 24 : ಮೀಟರ್ ಬಡ್ಡಿ ದಂಧೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೇಮಾವತಿ ನಗರದಲ್ಲಿ ನಡೆದಿದೆ.
ಸತ್ಯಪ್ರಸಾದ್ (54), ಅನ್ನಪೂರ್ಣ (50), ಗೌರವ್ (21) ಸಾವಿಗೀಡಾದ ಒಂದೇ ಕುಟುಂಬದ ಸದಸ್ಯರು. ಪತಿ - ಪತ್ನಿ ಹಾಗೂ ಪುತ್ರ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆದ್ರೆ, ಸ್ಥಳೀಯರ ಪ್ರಕಾರ ಕುಟುಂಬ ಇತ್ತಿಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಹಾಸನ ಮತ್ತು ಬೇಲೂರು ರಸ್ತೆಯ ಇಬ್ದಾಣೆ ಗ್ರಾಮದ ಸಮೀಪ ವೀರಭದ್ರೇಶ್ವರ ಪೆಟ್ರೋಲ್ ಬಂಕ್ ನೆಡೆಸುತ್ತಿದ್ದ ಈ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದ್ದರಿಂದ ಅದನ್ನು ಬೇರೆಯವರಿಗೆ ಬಿಟ್ಟುಕೊಟ್ಟಿದ್ದರು.
ಇತ್ತೀಚಿಗಷ್ಟೆ ಖಾಸಗಿ ಫೈನಾನ್ಸ್ ಮೂಲಕ ಐಷಾರಾಮಿ ಕಾರು ಸಹ ಖರೀದಿ ಮಾಡಿದ್ದರು. ಸಾಲದ ಸುಳಿಗೆ ಸಿಲುಕಿದ್ದರಿಂದ ಐಷಾರಾಮಿ ಕಾರನ್ನು ಬಡ್ಡಿದಂದೆ ಕೋರರು ಮೂರುದಿನಗಳ ಹಿಂದಷ್ಟೆ ವಶಕ್ಕೆ ಪಡೆದುಕೊಂಡು ಹೋಗಿದ್ದರು ಎನ್ನಲಾಗಿದೆ. ವಾರದ ಹಿಂದಷ್ಟೆ ಮಗನಿಗೆ ಉಪನಯನ ಕಾರ್ಯಕ್ರಮವನ್ನು ಬಹಳ ಅದ್ಧೂರಿಯಾಗಿ ಮನೆಯಲ್ಲಿಯೇ ನೆರವೇರಿಸಿದ್ದರು. ಮೈಸೂರಿನಲ್ಲಿ ಓದುತ್ತಿದ್ದ ಮಗ ನಾಳೆ ಮತ್ತೆ ಕಾಲೇಜಿಗೆ ಹೋಗಬೇಕಿತ್ತು. ಇಂದು ಮೃತರ ಅತ್ತೆ ಸೀತಾಲಕ್ಷ್ಮಿ ಸೊಸೆ ಅನ್ನಪೂರ್ಣರನ್ನು ಎಬ್ಬಿಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸಂಬಂಧಿಕರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫೆ.22ರಂದು ಮೀಟರ್ ಬಡ್ಡಿ ದಂಧೆಕೋರರು ಮನೆಗೆ ಬಂದು ಗಲಾಟೆ ನಡೆಸಿದ್ದು, ಮನನೊಂದ ಕುಟುಂಬ ಮರ್ಯಾದೆಗೆ ಅಂಜಿ ನೆನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
A businessman, his wife and their son were found dead at their residence in Hemavathi Nagar in Hassan on February 24. The deceased have been identified as Satya Prasad, 47, his wife Annapurna and their son Gaurav. Satya Prasad owns a fuel station on Belur Road on the outskirts of Hassan.
29-04-24 09:08 pm
HK News Desk
Five students drowned, Mekedatu: ಮೇಕೆದಾಟು ; ಬ...
29-04-24 06:34 pm
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 10:28 pm
Mangalore Correspondent
Mangalore Hindu Jagrana vedike: ಹಿಂದು ಸಂಘಟನೆ...
29-04-24 10:04 pm
Mangalore Accident, Kumpala; ಗುರುಪುರದಲ್ಲಿ ಅಪಘ...
29-04-24 09:41 pm
Thokottu Super Gold and diamonds in Mangalore...
29-04-24 08:05 pm
Kumpala Suicide, Mangalore: ಕುಂಪಲದಲ್ಲಿ ಇಬ್ಬರು...
29-04-24 11:05 am
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm