ಬ್ರೇಕಿಂಗ್ ನ್ಯೂಸ್
24-02-22 07:17 pm HK Desk news ಕರ್ನಾಟಕ
ಹಾಸನ, ಫೆ 24 : ಮೀಟರ್ ಬಡ್ಡಿ ದಂಧೆಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೇಮಾವತಿ ನಗರದಲ್ಲಿ ನಡೆದಿದೆ.
ಸತ್ಯಪ್ರಸಾದ್ (54), ಅನ್ನಪೂರ್ಣ (50), ಗೌರವ್ (21) ಸಾವಿಗೀಡಾದ ಒಂದೇ ಕುಟುಂಬದ ಸದಸ್ಯರು. ಪತಿ - ಪತ್ನಿ ಹಾಗೂ ಪುತ್ರ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆದ್ರೆ, ಸ್ಥಳೀಯರ ಪ್ರಕಾರ ಕುಟುಂಬ ಇತ್ತಿಚೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಹಾಸನ ಮತ್ತು ಬೇಲೂರು ರಸ್ತೆಯ ಇಬ್ದಾಣೆ ಗ್ರಾಮದ ಸಮೀಪ ವೀರಭದ್ರೇಶ್ವರ ಪೆಟ್ರೋಲ್ ಬಂಕ್ ನೆಡೆಸುತ್ತಿದ್ದ ಈ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದ್ದರಿಂದ ಅದನ್ನು ಬೇರೆಯವರಿಗೆ ಬಿಟ್ಟುಕೊಟ್ಟಿದ್ದರು.
ಇತ್ತೀಚಿಗಷ್ಟೆ ಖಾಸಗಿ ಫೈನಾನ್ಸ್ ಮೂಲಕ ಐಷಾರಾಮಿ ಕಾರು ಸಹ ಖರೀದಿ ಮಾಡಿದ್ದರು. ಸಾಲದ ಸುಳಿಗೆ ಸಿಲುಕಿದ್ದರಿಂದ ಐಷಾರಾಮಿ ಕಾರನ್ನು ಬಡ್ಡಿದಂದೆ ಕೋರರು ಮೂರುದಿನಗಳ ಹಿಂದಷ್ಟೆ ವಶಕ್ಕೆ ಪಡೆದುಕೊಂಡು ಹೋಗಿದ್ದರು ಎನ್ನಲಾಗಿದೆ. ವಾರದ ಹಿಂದಷ್ಟೆ ಮಗನಿಗೆ ಉಪನಯನ ಕಾರ್ಯಕ್ರಮವನ್ನು ಬಹಳ ಅದ್ಧೂರಿಯಾಗಿ ಮನೆಯಲ್ಲಿಯೇ ನೆರವೇರಿಸಿದ್ದರು. ಮೈಸೂರಿನಲ್ಲಿ ಓದುತ್ತಿದ್ದ ಮಗ ನಾಳೆ ಮತ್ತೆ ಕಾಲೇಜಿಗೆ ಹೋಗಬೇಕಿತ್ತು. ಇಂದು ಮೃತರ ಅತ್ತೆ ಸೀತಾಲಕ್ಷ್ಮಿ ಸೊಸೆ ಅನ್ನಪೂರ್ಣರನ್ನು ಎಬ್ಬಿಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಸಂಬಂಧಿಕರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫೆ.22ರಂದು ಮೀಟರ್ ಬಡ್ಡಿ ದಂಧೆಕೋರರು ಮನೆಗೆ ಬಂದು ಗಲಾಟೆ ನಡೆಸಿದ್ದು, ಮನನೊಂದ ಕುಟುಂಬ ಮರ್ಯಾದೆಗೆ ಅಂಜಿ ನೆನ್ನೆ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
A businessman, his wife and their son were found dead at their residence in Hemavathi Nagar in Hassan on February 24. The deceased have been identified as Satya Prasad, 47, his wife Annapurna and their son Gaurav. Satya Prasad owns a fuel station on Belur Road on the outskirts of Hassan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am