ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am