ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm