ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
07-02-25 04:22 pm
Bangalore Correspondent
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 03:12 pm
Mangalore Correspondent
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm