ಬ್ರೇಕಿಂಗ್ ನ್ಯೂಸ್
25-02-22 10:19 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.25 : ಉಡುಪಿ ಕಾಲೇಜಿನಲ್ಲಿ ವಿವಾದ ಉಂಟಾದ ಬಳಿಕ ಹಿಜಾಬ್ ಧರಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತ ವಿಚಾರಣೆಯನ್ನ ಹೈಕೋರ್ಟ್ ಕಡೆಗೂ ಮುಕ್ತಾಯಗೊಳಿಸಿದೆ. 11 ದಿನಗಳಿಂದ ನಿರಂತರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.
11 ದಿನಗಳಿಂದ ನಿರಂತರವಾಗಿ ಅರ್ಜಿದಾರರ ಪರ ವಕೀಲರು ಹಾಗೂ ಶಿಕ್ಷಕರ ಪರ ವಕೀಲರು, ಕಾಲೇಜು ಆಡಳಿತ ಮಂಡಳಿ ಪರ ವಕೀಲರ ವಾದ ಹಾಗೂ ಸರ್ಕಾರದ ಪರ ನಡೆಸಿದ ಅಡ್ವೊಕೇಟ್ ಜನರಲ್ ಪ್ರತಿವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅಂತಿಮವಾಗಿ ಇಂದು ಪಿಐಎಲ್ ಸಲ್ಲಿಸಿದ್ದ ವಕೀಲರಿಗೆ ವಾದ ಮಂಡಿಸಲು ಅವಕಾಶ ಮಾಡಿಕೊಟ್ಟಿತ್ತು.
)
ಈ ಹಿನ್ನೆಲೆ ರೆಹಮತ್ತುಲ್ಲಾ ಕೊತ್ವಾಲ್ ಹಿಜಾಬ್ ಧರಿಸೋದಕ್ಕೆ ಅವಕಾಶ ಕೋರಿ ವಾದ ಮಂಡಿಸಿದ್ರು. ಜೊತೆಗೆ ಹಿರಿಯ ವಕೀಲರಾದ ರವಿವರ್ಮಕುಮಾರ್ ಕೂಡ ವಾದ ಮಂಡಿಸಿದರು. ಕಾಲೇಜು ಅಭಿವೃದ್ದಿ ಸಮಿತಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ. ಹಾಗೆಂದು ಸರ್ಕಾರ ತನ್ನ ಅಧಿಕಾರವನ್ನು ಸಿಡಿಸಿಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ಸಿಡಿಸಿಯ ಇತರೇ ಸದಸ್ಯರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ಕಾಲೇಜುಗಳಲ್ಲಿ 12 ಜನರ ಸಮಿತಿಯಲ್ಲಿ 11 ಮಂದಿ ಶಾಸಕರ ಕಡೆಯವರೇ ಇದ್ದು ಶಾಸಕರ ತೀರ್ಮಾನವನ್ನು ಜಾರಿ ಮಾಡುವುದಷ್ಟೇ ಇವರ ಕೆಲಸ. ಶಾಸಕರಿಗೆ ಕಾಲೇಜಿನ ಆಡಳಿತ ನೀಡುವುದೇ ಕಾನೂನುಬಾಹಿರ ಎಂದು ರವಿವರ್ಮ ಕುಮಾರ್ ವಾದಿಸಿದರು.
ಇದಾದ ಬಳಿಕ ಹಿರಿಯ ವಕೀಲ ಬಾಲನ್ ಸಹ ಹಿಜಾಬ್ ಪರ ವಾದ ಮಂಡಿಸಿದ್ದು, ವಿಷಯ ಡೈವರ್ಟ್ ಮಾಡಿದ ಹಿನ್ನೆಲೆಯಲ್ಲಿ ಬಾಲನ್ ಅರ್ಜಿಯನ್ನ ವಜಾಗೊಳಿಸಿದ ನ್ಯಾಯಾಲಯ ಮತ್ತೊಬ್ಬ ಅರ್ಜಿದಾರರಾದ ಸುಭಾಷ್ ಝಾಗೆ ವಾದ ಮಂಡಿಸಲು ಅವಕಾಶ ಮಾಡಿಕೊಟ್ಟಿತ್ತು. ಕೊಟ್ಟ ಅಲ್ಪ ಸಮಯದಲ್ಲಿ ಅಲಹಾಬಾದ್, ಕೇರಳ ಹಾಗೂ ಬಾಂಬೆ ಹೈಕೋರ್ಟ್ ತೀರ್ಪುಗಳನ್ನ ಉಲ್ಲೇಖಿಸಿದ ಸುಭಾಷ್ ಝಾ ಸಮವಸ್ತ್ರ ಹಾಗೂ ಹಿಜಾಬ್ ಬಗ್ಗೆ ಕೆಲವು ದಾಖಲೆಗಳನ್ನ ಸಲ್ಲಿಸಿ ವಾದ ಮಂಡಿಸಿದ್ರು. ಹೀಗೆ ಸರಿ ಸುಮಾರು ಎರಡುವರೆ ಗಂಟೆಗಳ ಕಾಲ ನಡೆದ ವಾದ ಪ್ರತಿವಾದ ಆಲಿಸಿದ ಬಳಿಕ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸುವುದಾಗಿ ಹೇಳಿದ್ದು ತೀರ್ಪನ್ನ ಕಾಯ್ದಿರಿಸಿದೆ. ಇದಲ್ಲದೆ, ಕೆಲವು ಮಧ್ಯಂತರ ಅರ್ಜಿದಾರರಿಗೆ ಲಿಖಿತ ವಾದ ಮಂಡಿಸಲು ಅವಕಾಶ ನೀಡಿದ್ದು, ಅವುಗಳ ಪರಿಶೀಲನೆ ಬಳಿಕ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
The Karnataka High Court reserved its judgment in the hijab case after 11 days of back-to-back hearing on Friday. The hearing for the hijab case resumed at 2:30 pm in the Karnataka High Court.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm