ಬ್ರೇಕಿಂಗ್ ನ್ಯೂಸ್
26-02-22 11:47 am HK Desk news ಕರ್ನಾಟಕ
ಬಾಗಲಕೋಟ, ಫೆ.26 : ಉಕ್ರೇನ್ ಮೇಲೆ ನಿರಂತರವಾಗಿ ರಷ್ಯಾ ಪಡೆಗಳು ಬಾಂಬ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಉಕ್ರೇನಿನ ಪೂರ್ವ ಭಾಗದ ಖಾರ್ಕೀವ್ ನಗರದಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಅಪೂರ್ವಾ ತನ್ನ ಹೆತ್ತವರಿಗೆ ವಾಟ್ಸಾಪ್ ಸಂದೇಶ ಮಾಡಿದ್ದು ಭಯ, ಆತಂಕ ತೋಡಿಕೊಂಡಿದ್ದಾರೆ.
ತಂದೆ ಸಿದ್ದಲಿಂಗೇಶ್ ಅವರಿಗೆ ಶುಕ್ರವಾರ ರಾತ್ರಿ ವಾಟ್ಸಾಪ್ ಸಂದೇಶ ಕಳಿಸಿರುವ ಅಪೂರ್ವಾ ಕದಂಪುರ, ನಮ್ಮನ್ನು ಭಾರತ ಸರಕಾರ ರಕ್ಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಭಾರತೀಯ ಸಮಯ 10.56 ರಾತ್ರಿ. ನಾವು ಇರುವ ಕಾರ್ಕೇವ್ ನಗರದಲ್ಲಿ ನಮ್ಮ ಕಟ್ಟಡದ ಹತ್ತಿರವೇ ಬಾಂಬ್ ಹಾಕುತ್ತಿದ್ದಾರೆ. ನಾವು ಅಪಾಯದಲ್ಲಿ ಇದ್ದೇವೆ ,ನಮ್ಮ ಫೋನ್ಗಳನ್ನು ಫ್ಲೈಟ್ ಮೋಡಿನಲ್ಲಿ ಇಡಲು ಹೇಳಿದ್ದಾರೆ. ಫೋನ್ ಸಂಪರ್ಕ ಆಗದಿದ್ದರೆ ಭಯ ಪಡಬೇಡಿ. ಆದರೆ ನಮ್ಮ ಭಾರತ ಸರ್ಕಾರಕ್ಕೆ ನಮ್ಮ ಮನವಿ ಏನೆಂದರೆ, ನಾವು ಹೆಚ್ಚು ವಿದ್ಯಾರ್ಥಿಗಳು ಇರುವುದು ಉಕ್ರೇನಿನ ಪೂರ್ವ ಭಾಗ ಕಾರ್ಕೇವ್ ನಗರದಲ್ಲಿ. ನಮ್ಮನ್ನು ಪೋಲಾಂಡ್ ಮುಖಾಂತರ ಕೊಂಡೊಯ್ಯಲು ಯತ್ನಿಸುವುದು ತುಂಬಾ ಕಷ್ಟ. ಅಲ್ಲಿಂದ ಹೋದರೆ ಸುಮಾರು 1000- 1500 ಕಿಲೋಮೀಟರ್ ದೂರ ಆಗುತ್ತದೆ.

ಅದರ ಬದಲು ನಮ್ಮನ್ನು ರೊಮೇನಿಯಾ ಮುಖಾಂತರವೇ ಸ್ಥಳಾಂತರ ಮಾಡಿದ್ರೆ ಸರಿ ಅನ್ಸುತ್ತೆ. ದಯವಿಟ್ಟು ನಮ್ಮ ಸರ್ಕಾರಕ್ಕೆ ನಮ್ಮ ಅಭಿಪ್ರಾಯ ತಲುಪಿಸಿ. ಇಲ್ಲಿ ನಾವು 8000 ಜನ ವಿದ್ಯಾರ್ಥಿಗಳಿದ್ದೇವೆ. ಯಾವುದೇ ಸಾರಿಗೆ ವ್ಯವಸ್ಥೆ ಸರಿ ಇಲ್ಲ.. ದಯವಿಟ್ಟು ನಮ್ಮ ಮನವಿಯನ್ನು ಭಾರತೀಯ ರಾಯಭಾರಿ ಕಚೇರಿಗೂ ತಲುಪಿಸಿ ಎಂದು ಅಪೂರ್ವ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಭಾರತ ಸರಕಾರಕ್ಕೆ ತಮ್ಮ ಮನವಿ ತಲುಪಿಸುವಂತೆ ಕೋರಿದ್ದಾರೆ. ಅಪೂರ್ವಾ ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿದ್ದು ಎಂಬಿಬಿ ಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ. ಇದೇ ರೀತಿ ಬನಹಟ್ಟಿ ಮೂಲದ ಕಿರಣ ಸವದಿ ಕೂಡ ಮನವಿ ಮಾಡಿದ್ದಾರೆ. ಕಿರಣ ಸವದಿ ಕೂಡ ಅದೇ ಕಾರ್ಕೀವ್ ನಗರದಲ್ಲಿದ್ದಾರೆ.
Bagalkot girl cries for help from Ukraine pleads indian govt to save her
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm